ರಾಷ್ಟ್ರೀಯ

ದೇಶ ವಿಭಜಿಸುವ ಮಾತನ್ನು ನಾವು ಒಪ್ಪುವುದಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ ಡಿ.ಕೆ.ಸುರೇಶ್ ಹಾಗೆ ಹೇಳಿಲ್ಲ ಎಂದು ಹೇಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅದನ್ನು ಚರ್ಚಿಸಬಾರದು ಎಂದು ಹೇಳಿದರು.

ಇಂದು ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆಯನ್ನು ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಈ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಖರ್ಗೆ, ದೇಶ ವಿಭಜಿಸುವ ಮಾತುಗಳನ್ನು ಯಾರೇ ಆಡಿದರೂ ಸಹಿಸಲ್ಲ ಎಂದರು.

ಕೇಂದ್ರದ ಮಧ್ಯಂತರ ಬಜೆಟ್​ ಟೀಕಿಸುವ ಭರದಲ್ಲಿ ಡಿಕೆ ಸುರೇಶ್ ಗುರುವಾರ ನೀಡಿದ್ದ ಪ್ರತ್ಯೇಕ ರಾಷ್ಟ್ರ ಹೇಳಿಕೆ ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕರ್ನಾಟಕದಲ್ಲಿ ಬಿಜೆಪಿ ನಾಯಕರು ಡಿಕೆ ಸುರೇಶ್ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಡಿ.ಕೆ ಸುರೇಶ್‌ ಅವರ ದೇಶ ವಿಭಜನೆ ಹೇಳಿಕೆ ಸಂವಿಧಾನಕ್ಕೆ ಮಾಡಿದ ಅಪಮಾನ ಮಾಡಿದ್ದಾರೆ. ಅನುದಾನ ಸರಿಯಾಗಿ ನೀಡುತ್ತಿಲ್ಲ ಎಂದು ಸುಳ್ಳು ಆರೋಪ ಮಾಡಿ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಕ್ಷಮೆಯಾಚಿಸಬೇಕು ಅಲ್ಲದೇ ಇದರ ತಿನಿಖೆಯನ್ನು ನೈತಿಕ ಸಮಿತಿಗೆ ವಹಿಸಬೇಕು ಎಂದು ಪ್ರಲ್ಹಾದ್‌ ಜೋಷಿ ಆಗ್ರಹಿಸಿದ್ದಾರೆ.

ದೇಶದ ಏಕತೆ ಮತ್ತು ಸಾರ್ವಭೌಮತ್ವದ ಬಗ್ಗೆ ಯಾರೂ ಮಾತನಾಡಬಾರದು ಸಂಸದ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

12 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago