ನವದೆಹಲಿ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ ಡಿ.ಕೆ.ಸುರೇಶ್ ಹಾಗೆ ಹೇಳಿಲ್ಲ ಎಂದು ಹೇಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅದನ್ನು ಚರ್ಚಿಸಬಾರದು ಎಂದು ಹೇಳಿದರು.
ಇಂದು ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆಯನ್ನು ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಈ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಖರ್ಗೆ, ದೇಶ ವಿಭಜಿಸುವ ಮಾತುಗಳನ್ನು ಯಾರೇ ಆಡಿದರೂ ಸಹಿಸಲ್ಲ ಎಂದರು.
ಕೇಂದ್ರದ ಮಧ್ಯಂತರ ಬಜೆಟ್ ಟೀಕಿಸುವ ಭರದಲ್ಲಿ ಡಿಕೆ ಸುರೇಶ್ ಗುರುವಾರ ನೀಡಿದ್ದ ಪ್ರತ್ಯೇಕ ರಾಷ್ಟ್ರ ಹೇಳಿಕೆ ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕರ್ನಾಟಕದಲ್ಲಿ ಬಿಜೆಪಿ ನಾಯಕರು ಡಿಕೆ ಸುರೇಶ್ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಡಿ.ಕೆ ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ಸಂವಿಧಾನಕ್ಕೆ ಮಾಡಿದ ಅಪಮಾನ ಮಾಡಿದ್ದಾರೆ. ಅನುದಾನ ಸರಿಯಾಗಿ ನೀಡುತ್ತಿಲ್ಲ ಎಂದು ಸುಳ್ಳು ಆರೋಪ ಮಾಡಿ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಅಲ್ಲದೇ ಇದರ ತಿನಿಖೆಯನ್ನು ನೈತಿಕ ಸಮಿತಿಗೆ ವಹಿಸಬೇಕು ಎಂದು ಪ್ರಲ್ಹಾದ್ ಜೋಷಿ ಆಗ್ರಹಿಸಿದ್ದಾರೆ.
ದೇಶದ ಏಕತೆ ಮತ್ತು ಸಾರ್ವಭೌಮತ್ವದ ಬಗ್ಗೆ ಯಾರೂ ಮಾತನಾಡಬಾರದು ಸಂಸದ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…