ರಾಷ್ಟ್ರೀಯ

ಜನತಾ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ: ರಾಹುಲ್ ಗಾಂಧಿ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್​ಗಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನತಾ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಹೇಳಿದ್ದಾರೆ. ಮತ್ತು ಪಕ್ಷದ ತಾತ್ವಿಕ ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಭಾರಿಸಿದೆ. ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಲ ಕಿಲಕಿಲ ಎಂದಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಚುನಾವಣೆ ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು.

‘ಮಧ್ಯಪ್ರದೇಶ, ಛತ್ತೀಸ್​ಗಡ್ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ. ಆದರೆ, ವೈಚಾರಿಕ ಸಮರ ಮುಂದುವರಿಯುತ್ತದೆ,’ ಇನ್ನು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವನ್ನು ಸ್ವಾಗತಿಸಿರುವ ಅವರು ಅಲ್ಲಿನ ಜನತೆಗೆ ಧನ್ಯವಾದ. ‘ಪ್ರಜಾಲು ತೆಲಂಗಾಣ ನಿರ್ಮಿಸುವ ನಮ್ಮ ಭರವಸೆಯನ್ನು ಖಂಡಿತವಾಗಿ ಈಡೇರಿಸುತ್ತೇವೆ,’ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ತೆಲಂಗಾಣದ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ರೇವಂತ್ ರೆಡ್ಡಿ ಸಿಎಂ ರೇಸ್​ನಲ್ಲಿದ್ದಾರೆ. ಆದರೆ, ಕಾಮರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಸೋಲನಭವಿಸಿರುವುದು ಗಮನಾರ್ಹ.

 

andolanait

Recent Posts

ರಾಷ್ಟ್ರಕವಿ ಕುವೆಂಪು ಕಟ್ಟಿದ ಸಂವಿಧಾನ ಸ್ವಾಗತ ಗೀತೆ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…

12 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಚಲನ ಮೂಡಿಸಿದ ಬಿಜೆಪಿ-ಜಾ.ದಳ ಮೈತ್ರಿ ವಿಚಾರ

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…

26 mins ago

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

1 hour ago

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

2 hours ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

5 hours ago