ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂಧ್ರ ರೈಲು ದುರಂತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರೈಲ್ವೆ ನಿದ್ರೆಯಿಂದ ಯಾವಾಗ ಹೊರಬರುತ್ತವೆ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಮತ್ತೊಂದು ವಿನಾಶಕಾರಿ ರೈಲು ಅಪಘಾತ ಸಂಭವಿಸಿದೆ. ಈ ಬಾರಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ಪ್ರಯಾಣಿಕ ರೈಲುಗಳ ನಡುವೆ ನಡೆದ ಡಿಕ್ಕಿಯಲ್ಲಿ ಇದುವರೆಗೆ ಕನಿಷ್ಠ 8 ಸಾವುಗಳು ಮತ್ತು ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.
ರೈಲುಗಳ ನಡುವೆ ಮುಂಭಾಗದಲ್ಲಿ ಘರ್ಷಣೆಗಳು, ಬೋಗಿಗಳ ಹಳಿತಪ್ಪುವಿಕೆ, ಅಸಹಾಯಕ ಪ್ರಯಾಣಿಕರು ಬೋಗಿಗಳಲ್ಲಿ ಸಿಕ್ಕಿಹಾಕಿಕೊಂಡು ಬಲಿಯಾಗುತ್ತಿದ್ದಾರೆ: ಇದು ಅತ್ಯಂತ ದುರದೃಷ್ಟಕರ, ಮತ್ತೆ ಮತ್ತೆ ಮರುಕಳಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ಮೃತರ ಸಂಬಂಧಿಕರಿಗೆ ಸಂತಾಪ ಸೂಚಿಸಿರುವ ಮಮತಾ ಬ್ಯಾನರ್ಜಿ, ಘಟನೆ ಹಿನ್ನೆಲೆಯಲ್ಲಿ ಹೆಚ್ಚಿನ ತ್ವರಿತ ರಕ್ಷಣಾ ಕ್ರಮ ಕೈಗೊಳ್ಳಬೇಕು ಮತ್ತು ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ ವಿಜಯನಗರ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಆಂಧ್ರ ರೈಲು ಡಿಕ್ಕಿಯಲ್ಲಿ ಸಾವಿನ ಸಂಖ್ಯೆ 13 ಕ್ಕೆ ತಲುಪಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…