ರಾಜಸ್ಥಾನ: ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಸರ್ಕಾರ ರಚನೆ ಮಾಡುವುದು ಬಹುತೇಕ ಕಚಿತವಾಗಿದೆ. 199 ಕ್ಷೇತ್ರಗಳಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ಮಧ್ಯ ಈಗಾಗಲೇ ರಾಜಸ್ಥಾನದಲ್ಲಿ ಸಿಎಂ ಆಗುವವರು ಯಾರು ಎಂಬ ಪ್ರಶ್ನೆ, ಗೊಂದಲ ಎಲ್ಲರಲ್ಲೂ ಮನೆ ಮಾಡಿದೆ.
ಅನೇಕ ನಾಯಕರ ಹೆಸರು ಕೇಳಿ ಬಂದಿದ್ದು, ಈ ಮಧ್ಯೆ ವಸುಂಧರಾ ರಾಜೆ ಸಿಂದ್ಯ ಮತ್ತು ಮಹಂತ್ ಬಾಲಕನಾಥ್ ಸಿಎಂ ಆಗಬಹುದು ಎನ್ನಲಾಗುತ್ತಿದೆ. ರಾಜಸ್ಥಾನ ರಾಜ್ಯದಲ್ಲಿ ಎಕ್ಸಿಟ್ ಪೋಲ್ ಅಂದಾಜಿನ ಪ್ರಕಾರವೇ ಬಿಜೆಪಿ ಗೆಲುವು ಪಡೆಯುತ್ತಿದೆ. ಮೊನ್ನೆ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಸೂಚಿಸುತ್ತಿರುವಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.
ಬಿಜೆಪಿಯಲ್ಲಿ ಸಿಎಂ ಸಾಧ್ಯತೆ ಇರುವ ಹಲವು ಪ್ರಮುಖ ನಾಯಕರ ಹೆಸರು ಕೇಳಿಬಂದಿವೆ. ಅದರಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ ಸಿಂದ್ಯ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಇದರ ಜೊತೆಗೆ ಆಲ್ವಾರ್ನ ಸಂಸದ ಹಾಗೂ ಮಹಂತ್ ಬಾಲಕನಾಥ್ ಹೆಸರು ಕೂಡ ಪ್ರಧಾನವಾಗಿ ಕೇಳಿಬರುತ್ತಿದೆ.
ವಸುಂಧರಾ ರಾಜೆ ಮತ್ತು ಮಹಂತ್ ಬಾಲಕನಾಥ್ ಜೊತೆಗೆ ರಾಜಕುಮಾರಿ ಹಾಗೂ ರಾಜಸಮಂದ್ ಕ್ಷೇತ್ರದ ಸಂಸದೆ ದಿಯಾ ಕುಮಾರಿ, ಕೇಂದ್ರ ಸಚಿವರಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಹಾಗು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿವೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…