ರಾಜಸ್ಥಾನ: ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಸರ್ಕಾರ ರಚನೆ ಮಾಡುವುದು ಬಹುತೇಕ ಕಚಿತವಾಗಿದೆ. 199 ಕ್ಷೇತ್ರಗಳಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ಮಧ್ಯ ಈಗಾಗಲೇ ರಾಜಸ್ಥಾನದಲ್ಲಿ ಸಿಎಂ ಆಗುವವರು ಯಾರು ಎಂಬ ಪ್ರಶ್ನೆ, ಗೊಂದಲ ಎಲ್ಲರಲ್ಲೂ ಮನೆ ಮಾಡಿದೆ.
ಅನೇಕ ನಾಯಕರ ಹೆಸರು ಕೇಳಿ ಬಂದಿದ್ದು, ಈ ಮಧ್ಯೆ ವಸುಂಧರಾ ರಾಜೆ ಸಿಂದ್ಯ ಮತ್ತು ಮಹಂತ್ ಬಾಲಕನಾಥ್ ಸಿಎಂ ಆಗಬಹುದು ಎನ್ನಲಾಗುತ್ತಿದೆ. ರಾಜಸ್ಥಾನ ರಾಜ್ಯದಲ್ಲಿ ಎಕ್ಸಿಟ್ ಪೋಲ್ ಅಂದಾಜಿನ ಪ್ರಕಾರವೇ ಬಿಜೆಪಿ ಗೆಲುವು ಪಡೆಯುತ್ತಿದೆ. ಮೊನ್ನೆ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಸೂಚಿಸುತ್ತಿರುವಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.
ಬಿಜೆಪಿಯಲ್ಲಿ ಸಿಎಂ ಸಾಧ್ಯತೆ ಇರುವ ಹಲವು ಪ್ರಮುಖ ನಾಯಕರ ಹೆಸರು ಕೇಳಿಬಂದಿವೆ. ಅದರಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ ಸಿಂದ್ಯ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಇದರ ಜೊತೆಗೆ ಆಲ್ವಾರ್ನ ಸಂಸದ ಹಾಗೂ ಮಹಂತ್ ಬಾಲಕನಾಥ್ ಹೆಸರು ಕೂಡ ಪ್ರಧಾನವಾಗಿ ಕೇಳಿಬರುತ್ತಿದೆ.
ವಸುಂಧರಾ ರಾಜೆ ಮತ್ತು ಮಹಂತ್ ಬಾಲಕನಾಥ್ ಜೊತೆಗೆ ರಾಜಕುಮಾರಿ ಹಾಗೂ ರಾಜಸಮಂದ್ ಕ್ಷೇತ್ರದ ಸಂಸದೆ ದಿಯಾ ಕುಮಾರಿ, ಕೇಂದ್ರ ಸಚಿವರಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಹಾಗು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿವೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…