ರಾಷ್ಟ್ರೀಯ

ರಾಜಸ್ಥಾನದಲ್ಲಿ ಸಿಎಂ ಪೈಪೋಟಿಯಲ್ಲಿರುವವರು ಯಾರು?

ರಾಜಸ್ಥಾನ: ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಸರ್ಕಾರ ರಚನೆ ಮಾಡುವುದು ಬಹುತೇಕ ಕಚಿತವಾಗಿದೆ. 199 ಕ್ಷೇತ್ರಗಳಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ಮಧ್ಯ ಈಗಾಗಲೇ ರಾಜಸ್ಥಾನದಲ್ಲಿ ಸಿಎಂ ಆಗುವವರು ಯಾರು ಎಂಬ ಪ್ರಶ್ನೆ, ಗೊಂದಲ ಎಲ್ಲರಲ್ಲೂ ಮನೆ ಮಾಡಿದೆ.

ಅನೇಕ ನಾಯಕರ ಹೆಸರು ಕೇಳಿ ಬಂದಿದ್ದು, ಈ ಮಧ್ಯೆ ವಸುಂಧರಾ ರಾಜೆ ಸಿಂದ್ಯ ಮತ್ತು ಮಹಂತ್ ಬಾಲಕನಾಥ್ ಸಿಎಂ ಆಗಬಹುದು ಎನ್ನಲಾಗುತ್ತಿದೆ. ರಾಜಸ್ಥಾನ ರಾಜ್ಯದಲ್ಲಿ ಎಕ್ಸಿಟ್ ಪೋಲ್ ಅಂದಾಜಿನ ಪ್ರಕಾರವೇ ಬಿಜೆಪಿ ಗೆಲುವು ಪಡೆಯುತ್ತಿದೆ. ಮೊನ್ನೆ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಸೂಚಿಸುತ್ತಿರುವಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

ಬಿಜೆಪಿಯಲ್ಲಿ ಸಿಎಂ ಸಾಧ್ಯತೆ ಇರುವ ಹಲವು ಪ್ರಮುಖ ನಾಯಕರ ಹೆಸರು ಕೇಳಿಬಂದಿವೆ. ಅದರಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ ಸಿಂದ್ಯ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಇದರ ಜೊತೆಗೆ ಆಲ್ವಾರ್​ನ ಸಂಸದ ಹಾಗೂ ಮಹಂತ್ ಬಾಲಕನಾಥ್ ಹೆಸರು ಕೂಡ ಪ್ರಧಾನವಾಗಿ ಕೇಳಿಬರುತ್ತಿದೆ.

ವಸುಂಧರಾ ರಾಜೆ ಮತ್ತು ಮಹಂತ್ ಬಾಲಕನಾಥ್ ಜೊತೆಗೆ ರಾಜಕುಮಾರಿ ಹಾಗೂ ರಾಜಸಮಂದ್ ಕ್ಷೇತ್ರದ ಸಂಸದೆ ದಿಯಾ ಕುಮಾರಿ, ಕೇಂದ್ರ ಸಚಿವರಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಹಾಗು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿವೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago