ರಾಷ್ಟ್ರೀಯ

ರಾಜಸ್ಥಾನದಲ್ಲಿ ಸಿಎಂ ಪೈಪೋಟಿಯಲ್ಲಿರುವವರು ಯಾರು?

ರಾಜಸ್ಥಾನ: ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಸರ್ಕಾರ ರಚನೆ ಮಾಡುವುದು ಬಹುತೇಕ ಕಚಿತವಾಗಿದೆ. 199 ಕ್ಷೇತ್ರಗಳಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ಮಧ್ಯ ಈಗಾಗಲೇ ರಾಜಸ್ಥಾನದಲ್ಲಿ ಸಿಎಂ ಆಗುವವರು ಯಾರು ಎಂಬ ಪ್ರಶ್ನೆ, ಗೊಂದಲ ಎಲ್ಲರಲ್ಲೂ ಮನೆ ಮಾಡಿದೆ.

ಅನೇಕ ನಾಯಕರ ಹೆಸರು ಕೇಳಿ ಬಂದಿದ್ದು, ಈ ಮಧ್ಯೆ ವಸುಂಧರಾ ರಾಜೆ ಸಿಂದ್ಯ ಮತ್ತು ಮಹಂತ್ ಬಾಲಕನಾಥ್ ಸಿಎಂ ಆಗಬಹುದು ಎನ್ನಲಾಗುತ್ತಿದೆ. ರಾಜಸ್ಥಾನ ರಾಜ್ಯದಲ್ಲಿ ಎಕ್ಸಿಟ್ ಪೋಲ್ ಅಂದಾಜಿನ ಪ್ರಕಾರವೇ ಬಿಜೆಪಿ ಗೆಲುವು ಪಡೆಯುತ್ತಿದೆ. ಮೊನ್ನೆ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಸೂಚಿಸುತ್ತಿರುವಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

ಬಿಜೆಪಿಯಲ್ಲಿ ಸಿಎಂ ಸಾಧ್ಯತೆ ಇರುವ ಹಲವು ಪ್ರಮುಖ ನಾಯಕರ ಹೆಸರು ಕೇಳಿಬಂದಿವೆ. ಅದರಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ ಸಿಂದ್ಯ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಇದರ ಜೊತೆಗೆ ಆಲ್ವಾರ್​ನ ಸಂಸದ ಹಾಗೂ ಮಹಂತ್ ಬಾಲಕನಾಥ್ ಹೆಸರು ಕೂಡ ಪ್ರಧಾನವಾಗಿ ಕೇಳಿಬರುತ್ತಿದೆ.

ವಸುಂಧರಾ ರಾಜೆ ಮತ್ತು ಮಹಂತ್ ಬಾಲಕನಾಥ್ ಜೊತೆಗೆ ರಾಜಕುಮಾರಿ ಹಾಗೂ ರಾಜಸಮಂದ್ ಕ್ಷೇತ್ರದ ಸಂಸದೆ ದಿಯಾ ಕುಮಾರಿ, ಕೇಂದ್ರ ಸಚಿವರಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಹಾಗು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿವೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago