ನವದೆಹಲಿ : ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪ್ರಚಾರಾಭಿಯಾನದ ವೇಳೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೊರಮ್ತುಂಗ ಅವರು ಹೇಳಿದ್ದಾರೆಂದು ಬಿಬಿಸಿ ವರದಿ ಮಾಡಿದೆ. ರಾಜ್ಯದಲ್ಲಿ ಚುನಾವಣೆ ನವೆಂಬರ್ 7ರಂದು ನಡೆಯಲಿದೆ.
ಪ್ರಧಾನಿ ಮೋದಿ ಮಮಿತ್ ಪಟ್ಟಣಕ್ಕೆ ಅಕ್ಟೋಬರ್ 30ರಂದು ಭೇಟಿ ನೀಡುವ ಕಾರ್ಯಕ್ರಮವಿದ್ದು ಆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರ ಪ್ರಮುಖ ಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಬಿಜೆಪಿ ನೇತೃತ್ವದ ನಾರ್ತ್ ಈಸ್ಟ್ ಡೆಮಾಕ್ರೆಟಿಕ್ ಅಲಾಯನ್ಸ್ ಭಾಗವಾಗಿದ್ದರೂ ತಮ್ಮ ಪಕ್ಷ ಮಿಜೋ ನ್ಯಾಷನಲ್ ಫ್ರಂಟ್ ಈ ಹಂತದಲ್ಲಿ ಬಿಜೆಪಿಗೆ ಅನುಕಂಪ ತೋರಿಸುವ ಅಗತ್ಯವಿಲ್ಲ ಎಂದು ಮಣಿಪುರದ ಸಂಘರ್ಷಮಯ ಸ್ಥಿತಿಯನ್ನು ಉಲ್ಲೇಖಿಸಿ ಅವರು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ ಹೇಳಿದರು.
“ಮಿಜೋರಾಂನ ಜನರೆಲ್ಲರೂ ಕ್ರೈಸ್ತರು. ಮಣಿಪುರದಲ್ಲಿ ನೂರಾರು ಚರ್ಚುಗಳಿಗೆ ಮೈತೈಗಳು ಬೆಂಕಿ ಹಚ್ಚಿದಾಗ, ಅವರು (ಮಿಜೋರಾಂ ಜನರು) ಅದಕ್ಕೆ ಸಂಪೂರ್ಣ ವಿರುದ್ಧವಾಗಿದ್ದರು,” ಎಂದು ಅವರು ಹೇಳಿದರು.
“ಪ್ರಧಾನಿ ಅವರೊಬ್ಬರೇ ವೇದಿಕೆ ಹಂಚಿಕೊಂಡರೆ ಮತ್ತು ನಾನು ಪ್ರತ್ಯೇಕವಾಗಿ ಬೇರೆ ವೇದಿಕೆ ಹಂಚಿಕೊಂಡರೆ ಒಳ್ಳೆಯದು,” ಎಂದು ಮುಖ್ಯಮಂತ್ರಿ ಹೇಳಿದರು.
ನಮ್ಮ ಪಕ್ಷವು ಕಾಂಗ್ರೆಸ್ ಅನ್ನು ವಿರೋಧಿಸುವ ಕಾರಣ ಅದು ಕೇಂದ್ರದಲ್ಲಿ ಎನ್ಡಿಎ ಭಾಗವಾಗಿದೆ ಎಂದು ಅವರು ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…