ರಾಷ್ಟ್ರೀಯ

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ: ಮಿಜೋರಾಂ ಸಿಎಂ

ನವದೆಹಲಿ : ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪ್ರಚಾರಾಭಿಯಾನದ ವೇಳೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೊರಮ್ತುಂಗ ಅವರು ಹೇಳಿದ್ದಾರೆಂದು ಬಿಬಿಸಿ ವರದಿ ಮಾಡಿದೆ. ರಾಜ್ಯದಲ್ಲಿ ಚುನಾವಣೆ ನವೆಂಬರ್‌ 7ರಂದು ನಡೆಯಲಿದೆ.

ಪ್ರಧಾನಿ ಮೋದಿ ಮಮಿತ್‌ ಪಟ್ಟಣಕ್ಕೆ ಅಕ್ಟೋಬರ್‌ 30ರಂದು ಭೇಟಿ ನೀಡುವ ಕಾರ್ಯಕ್ರಮವಿದ್ದು ಆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತಿತರ ಪ್ರಮುಖ ಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಬಿಜೆಪಿ ನೇತೃತ್ವದ ನಾರ್ತ್‌ ಈಸ್ಟ್‌ ಡೆಮಾಕ್ರೆಟಿಕ್‌ ಅಲಾಯನ್ಸ್‌ ಭಾಗವಾಗಿದ್ದರೂ ತಮ್ಮ ಪಕ್ಷ ಮಿಜೋ ನ್ಯಾಷನಲ್‌ ಫ್ರಂಟ್‌ ಈ ಹಂತದಲ್ಲಿ ಬಿಜೆಪಿಗೆ ಅನುಕಂಪ ತೋರಿಸುವ ಅಗತ್ಯವಿಲ್ಲ ಎಂದು ಮಣಿಪುರದ ಸಂಘರ್ಷಮಯ ಸ್ಥಿತಿಯನ್ನು ಉಲ್ಲೇಖಿಸಿ ಅವರು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ ಹೇಳಿದರು.

“ಮಿಜೋರಾಂನ ಜನರೆಲ್ಲರೂ ಕ್ರೈಸ್ತರು. ಮಣಿಪುರದಲ್ಲಿ ನೂರಾರು ಚರ್ಚುಗಳಿಗೆ ಮೈತೈಗಳು ಬೆಂಕಿ ಹಚ್ಚಿದಾಗ, ಅವರು (ಮಿಜೋರಾಂ ಜನರು) ಅದಕ್ಕೆ ಸಂಪೂರ್ಣ ವಿರುದ್ಧವಾಗಿದ್ದರು,” ಎಂದು ಅವರು ಹೇಳಿದರು.

“ಪ್ರಧಾನಿ ಅವರೊಬ್ಬರೇ ವೇದಿಕೆ ಹಂಚಿಕೊಂಡರೆ ಮತ್ತು ನಾನು ಪ್ರತ್ಯೇಕವಾಗಿ ಬೇರೆ ವೇದಿಕೆ ಹಂಚಿಕೊಂಡರೆ ಒಳ್ಳೆಯದು,” ಎಂದು ಮುಖ್ಯಮಂತ್ರಿ ಹೇಳಿದರು.

ನಮ್ಮ ಪಕ್ಷವು ಕಾಂಗ್ರೆಸ್‌ ಅನ್ನು ವಿರೋಧಿಸುವ ಕಾರಣ ಅದು ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿದೆ ಎಂದು ಅವರು ಹೇಳಿದರು.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

5 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

6 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

11 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

14 hours ago