ರಾಷ್ಟ್ರೀಯ

ಅರ್ಜಿಗಳಲ್ಲಿ ನಿಮ್ಮನ್ನು ನೀವು ‘ರಿಪಬ್ಲಿಕ್ ಆಫ್ ಇಂಡಿಯಾ’ ಎಂದು ಹೇಳಿಕೊಳ್ಳುವಂತಿಲ್ಲ: ಸುಪ್ರೀಂ

ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ.

‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯೊಂದನ್ನು ಶುಕ್ರವಾರ ವಿಚಾರಣೆಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಪಂಕಜ ಮಿತ್ತಲ್ ಅವರ ಪೀಠವು, ‘ನೀವು ರಿಪಬ್ಲಿಕ್ ಆಫ್ ಇಂಡಿಯಾ’ ಎಂದೇಕೆ ಅರ್ಜಿ ಸಲ್ಲಿಸಿದ್ದೀರಿ? ನೀವು ಭಾರತ ಒಕ್ಕೂಟವನ್ನು ಅಥವಾ ಗಣರಾಜ್ಯವನ್ನು ಪ್ರತಿನಿಧಿಸುತ್ತಿಲ್ಲ ಎಂದು ಕುಟುಕಿತು.

ಸಿಬಿಐ ‘ರಿಪಬ್ಲಿಕ್ ಆಫ್ ಇಂಡಿಯಾ’ಎಂದು ಹೇಳಿಕೊಂಡು ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಲ್ಲ. ನೀವು ಭಾರತ ಒಕ್ಕೂಟವನ್ನು ಪ್ರತಿನಿಧಿಸುವುದಿಲ್ಲ. ನೀವು ಹಾಗೆ ಅರ್ಜಿಗಳನ್ನು ಸಲ್ಲಿಸುವಂತಿಲ್ಲ ಎಂದು ಪೀಠವು ಸಿಬಿಐ ಪ್ರಕರಣವೊಂದರಲ್ಲಿ ಜಾಮೀನು ವಿರುದ್ದ ಸಲ್ಲಿಸಲಾದ ಮೇಲ್ಮನವಿಯಲ್ಲಿ ತನಿಖಾ ಸಂಸ್ಥೆಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಉದ್ದೇಶಿಸಿ ಹೇಳಿತು.

ಬಳಿಕ ಪೀಠವು ‘ರಿಪಬ್ಲಿಕ್ ಆಫ್ ಇಂಡಿಯಾ’ಪದಗಳನ್ನು ಕೈಬಿಟ್ಟು ಪ್ರಕರಣದ ಕಾರಣ-ಶೀರ್ಷಿಕೆಯನ್ನು ಬದಲಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿತು. ಭಾಟಿ ಅದನ್ನು ಒಪ್ಪಿಕೊಂಡರು.

andolanait

Recent Posts

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

46 mins ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

49 mins ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

2 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

2 hours ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

2 hours ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

2 hours ago