ರಾಷ್ಟ್ರೀಯ

ಅರ್ಜಿಗಳಲ್ಲಿ ನಿಮ್ಮನ್ನು ನೀವು ‘ರಿಪಬ್ಲಿಕ್ ಆಫ್ ಇಂಡಿಯಾ’ ಎಂದು ಹೇಳಿಕೊಳ್ಳುವಂತಿಲ್ಲ: ಸುಪ್ರೀಂ

ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ.

‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯೊಂದನ್ನು ಶುಕ್ರವಾರ ವಿಚಾರಣೆಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಪಂಕಜ ಮಿತ್ತಲ್ ಅವರ ಪೀಠವು, ‘ನೀವು ರಿಪಬ್ಲಿಕ್ ಆಫ್ ಇಂಡಿಯಾ’ ಎಂದೇಕೆ ಅರ್ಜಿ ಸಲ್ಲಿಸಿದ್ದೀರಿ? ನೀವು ಭಾರತ ಒಕ್ಕೂಟವನ್ನು ಅಥವಾ ಗಣರಾಜ್ಯವನ್ನು ಪ್ರತಿನಿಧಿಸುತ್ತಿಲ್ಲ ಎಂದು ಕುಟುಕಿತು.

ಸಿಬಿಐ ‘ರಿಪಬ್ಲಿಕ್ ಆಫ್ ಇಂಡಿಯಾ’ಎಂದು ಹೇಳಿಕೊಂಡು ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಲ್ಲ. ನೀವು ಭಾರತ ಒಕ್ಕೂಟವನ್ನು ಪ್ರತಿನಿಧಿಸುವುದಿಲ್ಲ. ನೀವು ಹಾಗೆ ಅರ್ಜಿಗಳನ್ನು ಸಲ್ಲಿಸುವಂತಿಲ್ಲ ಎಂದು ಪೀಠವು ಸಿಬಿಐ ಪ್ರಕರಣವೊಂದರಲ್ಲಿ ಜಾಮೀನು ವಿರುದ್ದ ಸಲ್ಲಿಸಲಾದ ಮೇಲ್ಮನವಿಯಲ್ಲಿ ತನಿಖಾ ಸಂಸ್ಥೆಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಉದ್ದೇಶಿಸಿ ಹೇಳಿತು.

ಬಳಿಕ ಪೀಠವು ‘ರಿಪಬ್ಲಿಕ್ ಆಫ್ ಇಂಡಿಯಾ’ಪದಗಳನ್ನು ಕೈಬಿಟ್ಟು ಪ್ರಕರಣದ ಕಾರಣ-ಶೀರ್ಷಿಕೆಯನ್ನು ಬದಲಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿತು. ಭಾಟಿ ಅದನ್ನು ಒಪ್ಪಿಕೊಂಡರು.

andolanait

Recent Posts

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

59 seconds ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

1 hour ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

1 hour ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

2 hours ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

3 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

3 hours ago