ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ.
‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯೊಂದನ್ನು ಶುಕ್ರವಾರ ವಿಚಾರಣೆಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಪಂಕಜ ಮಿತ್ತಲ್ ಅವರ ಪೀಠವು, ‘ನೀವು ರಿಪಬ್ಲಿಕ್ ಆಫ್ ಇಂಡಿಯಾ’ ಎಂದೇಕೆ ಅರ್ಜಿ ಸಲ್ಲಿಸಿದ್ದೀರಿ? ನೀವು ಭಾರತ ಒಕ್ಕೂಟವನ್ನು ಅಥವಾ ಗಣರಾಜ್ಯವನ್ನು ಪ್ರತಿನಿಧಿಸುತ್ತಿಲ್ಲ ಎಂದು ಕುಟುಕಿತು.
ಸಿಬಿಐ ‘ರಿಪಬ್ಲಿಕ್ ಆಫ್ ಇಂಡಿಯಾ’ಎಂದು ಹೇಳಿಕೊಂಡು ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಲ್ಲ. ನೀವು ಭಾರತ ಒಕ್ಕೂಟವನ್ನು ಪ್ರತಿನಿಧಿಸುವುದಿಲ್ಲ. ನೀವು ಹಾಗೆ ಅರ್ಜಿಗಳನ್ನು ಸಲ್ಲಿಸುವಂತಿಲ್ಲ ಎಂದು ಪೀಠವು ಸಿಬಿಐ ಪ್ರಕರಣವೊಂದರಲ್ಲಿ ಜಾಮೀನು ವಿರುದ್ದ ಸಲ್ಲಿಸಲಾದ ಮೇಲ್ಮನವಿಯಲ್ಲಿ ತನಿಖಾ ಸಂಸ್ಥೆಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಉದ್ದೇಶಿಸಿ ಹೇಳಿತು.
ಬಳಿಕ ಪೀಠವು ‘ರಿಪಬ್ಲಿಕ್ ಆಫ್ ಇಂಡಿಯಾ’ಪದಗಳನ್ನು ಕೈಬಿಟ್ಟು ಪ್ರಕರಣದ ಕಾರಣ-ಶೀರ್ಷಿಕೆಯನ್ನು ಬದಲಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿತು. ಭಾಟಿ ಅದನ್ನು ಒಪ್ಪಿಕೊಂಡರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…