ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ.
‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯೊಂದನ್ನು ಶುಕ್ರವಾರ ವಿಚಾರಣೆಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಪಂಕಜ ಮಿತ್ತಲ್ ಅವರ ಪೀಠವು, ‘ನೀವು ರಿಪಬ್ಲಿಕ್ ಆಫ್ ಇಂಡಿಯಾ’ ಎಂದೇಕೆ ಅರ್ಜಿ ಸಲ್ಲಿಸಿದ್ದೀರಿ? ನೀವು ಭಾರತ ಒಕ್ಕೂಟವನ್ನು ಅಥವಾ ಗಣರಾಜ್ಯವನ್ನು ಪ್ರತಿನಿಧಿಸುತ್ತಿಲ್ಲ ಎಂದು ಕುಟುಕಿತು.
ಸಿಬಿಐ ‘ರಿಪಬ್ಲಿಕ್ ಆಫ್ ಇಂಡಿಯಾ’ಎಂದು ಹೇಳಿಕೊಂಡು ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಲ್ಲ. ನೀವು ಭಾರತ ಒಕ್ಕೂಟವನ್ನು ಪ್ರತಿನಿಧಿಸುವುದಿಲ್ಲ. ನೀವು ಹಾಗೆ ಅರ್ಜಿಗಳನ್ನು ಸಲ್ಲಿಸುವಂತಿಲ್ಲ ಎಂದು ಪೀಠವು ಸಿಬಿಐ ಪ್ರಕರಣವೊಂದರಲ್ಲಿ ಜಾಮೀನು ವಿರುದ್ದ ಸಲ್ಲಿಸಲಾದ ಮೇಲ್ಮನವಿಯಲ್ಲಿ ತನಿಖಾ ಸಂಸ್ಥೆಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಉದ್ದೇಶಿಸಿ ಹೇಳಿತು.
ಬಳಿಕ ಪೀಠವು ‘ರಿಪಬ್ಲಿಕ್ ಆಫ್ ಇಂಡಿಯಾ’ಪದಗಳನ್ನು ಕೈಬಿಟ್ಟು ಪ್ರಕರಣದ ಕಾರಣ-ಶೀರ್ಷಿಕೆಯನ್ನು ಬದಲಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿತು. ಭಾಟಿ ಅದನ್ನು ಒಪ್ಪಿಕೊಂಡರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…