ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ.
‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯೊಂದನ್ನು ಶುಕ್ರವಾರ ವಿಚಾರಣೆಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಪಂಕಜ ಮಿತ್ತಲ್ ಅವರ ಪೀಠವು, ‘ನೀವು ರಿಪಬ್ಲಿಕ್ ಆಫ್ ಇಂಡಿಯಾ’ ಎಂದೇಕೆ ಅರ್ಜಿ ಸಲ್ಲಿಸಿದ್ದೀರಿ? ನೀವು ಭಾರತ ಒಕ್ಕೂಟವನ್ನು ಅಥವಾ ಗಣರಾಜ್ಯವನ್ನು ಪ್ರತಿನಿಧಿಸುತ್ತಿಲ್ಲ ಎಂದು ಕುಟುಕಿತು.
ಸಿಬಿಐ ‘ರಿಪಬ್ಲಿಕ್ ಆಫ್ ಇಂಡಿಯಾ’ಎಂದು ಹೇಳಿಕೊಂಡು ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಲ್ಲ. ನೀವು ಭಾರತ ಒಕ್ಕೂಟವನ್ನು ಪ್ರತಿನಿಧಿಸುವುದಿಲ್ಲ. ನೀವು ಹಾಗೆ ಅರ್ಜಿಗಳನ್ನು ಸಲ್ಲಿಸುವಂತಿಲ್ಲ ಎಂದು ಪೀಠವು ಸಿಬಿಐ ಪ್ರಕರಣವೊಂದರಲ್ಲಿ ಜಾಮೀನು ವಿರುದ್ದ ಸಲ್ಲಿಸಲಾದ ಮೇಲ್ಮನವಿಯಲ್ಲಿ ತನಿಖಾ ಸಂಸ್ಥೆಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಉದ್ದೇಶಿಸಿ ಹೇಳಿತು.
ಬಳಿಕ ಪೀಠವು ‘ರಿಪಬ್ಲಿಕ್ ಆಫ್ ಇಂಡಿಯಾ’ಪದಗಳನ್ನು ಕೈಬಿಟ್ಟು ಪ್ರಕರಣದ ಕಾರಣ-ಶೀರ್ಷಿಕೆಯನ್ನು ಬದಲಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿತು. ಭಾಟಿ ಅದನ್ನು ಒಪ್ಪಿಕೊಂಡರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…