ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ ಚುನಾವಣೆಯಿಂದ ಹಿಂದಕ್ಕೆ ಸರಿಯುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಬುಧವಾರ ದಿಲ್ಲಿಗೆ ಬರುವಂತೆ ಹೇಳಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಮಿತ್ ಶಾ ಅವರು ಕರೆ ಮಾಡಿ ಪಕ್ಷದ ಹಿರಿಯರಿದ್ದೀರಿ, ನೀವು ಸ್ಪರ್ಧೆ ಮಾಡುವುದು ಆಶ್ಚರ್ಯ ತಂದಿದೆ ಎಂದರು. ಅದಕ್ಕೆ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಮೋದಿಯವರು ಕುಟುಂಬ ರಾಜಕಾರಣ ಇಷ್ಟಪಡಲ್ಲ, ಆದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯ ಉಸ್ತುವಾರಿಯೇ ಒಂದು ಕುಟುಬಂದ ಕೈಯಲ್ಲಿದೆ. ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷ ಹೋಗಿರುವುದು ತುಂಬಾ ಅನ್ಯಾಯ, ಇದರಿಂದ ಪಕ್ಷದ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ ಎಂದು ತಿಳಿಸಿದ್ದೇನೆ ಎಂದರು.
ನಾಳೆಯೇ ಪಕ್ಷದ ರಾಜ್ಯಧ್ಯಕ್ಷರನ್ನು ಬದಲಾವಣೆ ಮಾಡಿ ಚುನಾವಣೆ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದೀನಿ ಎಂದು ಈಶ್ವರಪ್ಪ ಹೇಳಿದರು
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…