ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದರು.
ಎಲ್ಲಾ ಮುಖಂಡರ ಅಭಿಪ್ರಾಯ ಆಲಿಸಿದ ಮಾಜಿ ಮುಖ್ಯಮಂತ್ರಿಗಳು, ಮುಖಂಡರಿಗೆ ಕೆಲ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರು, ಮುಖಂಡರು ಪಕ್ಷದ ಹಿತರಕ್ಷಣೆ ಬಗ್ಗೆ ಆತಂಕಪಡಬೇಕಾಗಿಲ್ಲ. ಕಹಿಯನ್ನು ಮರೆತು ಕೆಲಸ ಮಾಡೋಣ, ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ ಎಂದರು.
ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್ ನವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಮುಖಂಡರಿಗೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…