ರಾಜಕೀಯ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ : ರಾಮನಗರ ಜೆಡಿಎಸ್ ಪ್ರಮುಖರ ಸಭೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಎಲ್ಲಾ ಮುಖಂಡರ ಅಭಿಪ್ರಾಯ ಆಲಿಸಿದ ಮಾಜಿ ಮುಖ್ಯಮಂತ್ರಿಗಳು, ಮುಖಂಡರಿಗೆ ಕೆಲ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರು, ಮುಖಂಡರು ಪಕ್ಷದ ಹಿತರಕ್ಷಣೆ ಬಗ್ಗೆ ಆತಂಕಪಡಬೇಕಾಗಿಲ್ಲ. ಕಹಿಯನ್ನು ಮರೆತು ಕೆಲಸ ಮಾಡೋಣ, ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ ಎಂದರು.

ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್ ನವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಮುಖಂಡರಿಗೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

andolanait

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

1 hour ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

1 hour ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

1 hour ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

2 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

2 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

2 hours ago