ರಾಜಕೀಯ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ : ರಾಮನಗರ ಜೆಡಿಎಸ್ ಪ್ರಮುಖರ ಸಭೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಎಲ್ಲಾ ಮುಖಂಡರ ಅಭಿಪ್ರಾಯ ಆಲಿಸಿದ ಮಾಜಿ ಮುಖ್ಯಮಂತ್ರಿಗಳು, ಮುಖಂಡರಿಗೆ ಕೆಲ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರು, ಮುಖಂಡರು ಪಕ್ಷದ ಹಿತರಕ್ಷಣೆ ಬಗ್ಗೆ ಆತಂಕಪಡಬೇಕಾಗಿಲ್ಲ. ಕಹಿಯನ್ನು ಮರೆತು ಕೆಲಸ ಮಾಡೋಣ, ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ ಎಂದರು.

ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್ ನವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಮುಖಂಡರಿಗೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

2 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

4 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

6 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

7 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

8 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

8 hours ago