ಬೆಳಗಾವಿ : ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮತ್ತೆ ಬಾಂಬ್ ಸಿಡಿಸಿದ್ದಾರೆ.
ಸುವರ್ಣಸೌಧದ ಬಳಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗದವರಿಗೆ ನಾಯಕತ್ವ ನೀಡಿ ನ್ಯಾಯ ಒದಗಿಸುವವರೆಗೂ ನಾನು ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ. ಉತ್ತರ ಕರ್ನಾಟಕದವರು ದಕ್ಷಿಣ ಕರ್ನಾಟಕದವರ ಗುಲಾಮರಲ್ಲ ಎಂದು ಗರಂ ಆಗಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ತೆಲಂಗಾಣದಲ್ಲಿ ಕುಟುಂಬ ರಾಜಕಾರಣವನ್ನು ಕಿತ್ತೊಗೆದಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಕೊನೆಗಾಣಲಿದೆ. ವಂಶ ರಾಜಕಾರಣವನ್ನು ಕೊನೆಗಾಣಿಸುವುದೇ ನಮ್ಮ ಗುರಿ ಲೊಕಸಭಾ ಚುನವಾಣೆ ಮುಗಿದ ನಂತರ ರಾಜ್ಯದಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರೂ ಕೂಡ ಬದಲಾಗಲಿದ್ದಾರೆ ಎಂದಿದ್ದಾರೆ.
ಇತ್ತೀಚೆಗಷ್ಟೇ ವಿಜಯಪುರದಲ್ಲಿ ನಡೆದ ದಾನಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಷಣ ಮಾಡುವ ವೇಳೆ ಯತ್ನಾಳ್ ಅವರು ಈಗ ನಾನೆ ವಿಪಕ್ಷ ನಾಯಕ. ಹೈಕಮಾಂಡ್ ನಿಂದ ವಿಪಕ್ಷ ನಾಯಕನ ನೇಮಕವಾಗಿದ್ದರೂ ನಾನೇ ವಿಪಕ್ಷ ನಾಯಕ ಎಂದು ಬಾಂಬ್ ಒಂದನ್ನು ಸಿಡಿಸಿದ್ದರು.
ಇನ್ನು ಮುಂದೆ ನಮ್ಮ ದಂಗಲ್ ಶುರುವಾಗುತ್ತೆ. ಆಗ ಯಾರು ನಿಜವಾದ ವಿಪಕ್ಷ ನಾಯಕ ಅಂತ ಫಿಕ್ಸ್ ಮಾಡ್ತೀವಿ. ಈಗ ನಾನೇ ವಿಪಕ್ಷ ನಾಯಕ. ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನ ಸೇಲ್ ಆಗಿದೆಯಾ ? ಯಾರಾದರೂ ಏನಾದರೂ ಕೊಟ್ಟು ತಗೊಂಡು ಮಾಡಿದ್ರೆ ನಾವು ಒಪ್ಪುತ್ತೇವೆ ಎಂದು ಹೇಳಿದ್ದರು.
ಇದೀಗ ಮತ್ತೆ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಬದಲಾವಣೆಯ ಬಗ್ಗೆ ಮಾತನಾಡುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜಕೀಯ ವಲಯದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ.
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…