ರಾಜಕೀಯ

ಬಿಜೆಪಿಗೆ ವೋಟ್‌ ಹಾಕಿದ್ರೆ ಗ್ಯಾರಂಟಿ ನಿಲ್ಲಿಸಿಬಿಡ್ತಾರೆ: ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪರ ನಾಯಕರು ಪ್ರಚಾರವನ್ನು ಆರಂಭಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರದೀಪ್‌ ಈಶ್ವರ್‌ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿ, ಈ ಬಾರಿ ಬಿಜೆಪಿಗೆ ಮತ ಹಾಕಿದ್ರೆ ಫ್ರೀ ಬಸ್‌ ನಿಲ್ಲಿಸಿಬಿಡ್ತಾರೆ ಎಂದು ಹೇಳಿದರು.

ʼಯುವಕರು ಬರಬೇಕು. ಶರತ್‌ ಬಚ್ಚೇಗೌಡ ಅವರು ಬಂದಿರೋದಕ್ಕೆ ಅಭಿವೃದ್ಧಿ ಆಗ್ತಿದೆ. ಶರತ್‌ ಬಚ್ಚೇಗೌಡ ಅವರಿಗೆ ಜಯವಾಗಲಿ. ನನಗೆ ಹೇಗೆ ಬೆಂಬಲ ನೀಡಿದ್ರೋ ಅದೇ ರೀತಿ ರಕ್ಷಾ ರಾಮಯ್ಯ ಅವರಿಗೂ ಬೆಂಬಲಿಸಿ. ನಮ್ಮ ಸರ್ಕಾರ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ನಡೆಸುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಅಕ್ಕಂದ್ರೇ ಕೇಳಿಸಿಕೊಳ್ಳಿ. ನೀವು ಬಿಜೆಪಿಗೆ ವೋಟ್‌ ಹಾಕಿದ್ರೆ ಗ್ಯಾರಂಟಿ ನಿಲ್ಲಿಸಿಬಿಡ್ತಾರೆ. ನೀವು ಮತ್ತೆ ಬಸ್‌ನಲ್ಲಿ ಟಿಕೆಟ್‌ ತಗೊಬೇಕಾಗುತ್ತೆ. 2000 ನಿಲ್ಲಿಸಿಬಿಡ್ತಾರೆ. ಕಾಂಗ್ರೆಸ್‌ಗೆ ವೋಟ್‌ ಹಾಕಿʼ ಎಂದು ಹೇಳಿದರು.

andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago