ರಾಜಕೀಯ

ಬಿಜೆಪಿಯ ಆಂತರಿಕ ಕಲಹ ಈಗ ಬೀದಿ ಜಗಳವಾಗಿದೆ : ಕಾಂಗ್ರೆಸ್‌

ಬೆಂಗಳೂರು : ಬಿಜೆಪಿಯ ಆಂತರಿಕ ಕಲಹ ಈಗ ಆಂತರಿಕವಾಗಿಲ್ಲ, ಬೀದಿ ಜಗಳವಾಗಿ ಪರಿಣಮಿಸಿದೆʼ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಬಿಜೆಪಿ ಸಂಸದರ ಮೇಲೆ ಕೊಲೆ ಷಡ್ಯಂತ್ರದ ಆರೋಪ ಹೋರಿಸಿದ ನಂತರ ಭಗವಂತ ಖೂಬಾ ಅವರು ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಅಂಟಿಸಿಪೇಟರಿ ಬೇಲ್ ಪಡೆಯುತ್ತಿದ್ದಾರೆ. ಇದರ ಅರ್ಥ ಚೌಹಾಣ್ ಅವರು ಮುಂದೆ ಅಹಿತಕರ ಘಟನೆಯನ್ನು ಎದುರಿಸಬೇಕಾಗುತ್ತದೆ ಎಂಬ ಸುಳಿವು ನೀಡಿದ್ದೇ ಎಂದು ಸಂಶಯ ವ್ಯಕ್ತಪಡಿಸಿದೆ.

ಬಿಜೆಪಿ ಶಾಸಕರ ಆರೋಪದ ಬಗೆಗಿನ ತನಿಖೆಗೆ ರಾಜ್ಯದ ಪೋಲೀಸರ ಬದಲು ಸಿಬಿಐ ತನಿಖೆಗೆ ಆಗ್ರಹಿಸಿಲ್ಲವೇಕೆ? ಸಂಸದರ ಷಡ್ಯಂತ್ರದ ಬಗ್ಗೆ ಮೋದಿಗೆ ದೂರು ಕೊಡಲಿಲ್ಲವೇಕೆ? ತಮ್ಮ ಶಾಸಕರಿಗೆ ಜೀವ ಬೆದರಿಕೆ ಇದ್ದರೂ ಬಿಜೆಪಿ ಮೌನ ವಹಿಸಿರುವುದೇಕೆ? ಎಂದು ಕಾಂಗ್ರೆಸ್‌ ರಾಜ್ಯ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದರು.

ಈ ವಿಚಾರವಾಗಿ ಬೀದರ್ ಎಸ್ ಪಿ ಗೆ ಪತ್ರ ಬರೆದಿರುವ‌ ಕೇಂದ್ರ ಸಚಿವ ಭಗವಂತ ಖೂಬಾ ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

36 seconds ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

28 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago