ರಾಜಕೀಯ

ಬಿಜೆಪಿಯ ಆಂತರಿಕ ಕಲಹ ಈಗ ಬೀದಿ ಜಗಳವಾಗಿದೆ : ಕಾಂಗ್ರೆಸ್‌

ಬೆಂಗಳೂರು : ಬಿಜೆಪಿಯ ಆಂತರಿಕ ಕಲಹ ಈಗ ಆಂತರಿಕವಾಗಿಲ್ಲ, ಬೀದಿ ಜಗಳವಾಗಿ ಪರಿಣಮಿಸಿದೆʼ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಬಿಜೆಪಿ ಸಂಸದರ ಮೇಲೆ ಕೊಲೆ ಷಡ್ಯಂತ್ರದ ಆರೋಪ ಹೋರಿಸಿದ ನಂತರ ಭಗವಂತ ಖೂಬಾ ಅವರು ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಅಂಟಿಸಿಪೇಟರಿ ಬೇಲ್ ಪಡೆಯುತ್ತಿದ್ದಾರೆ. ಇದರ ಅರ್ಥ ಚೌಹಾಣ್ ಅವರು ಮುಂದೆ ಅಹಿತಕರ ಘಟನೆಯನ್ನು ಎದುರಿಸಬೇಕಾಗುತ್ತದೆ ಎಂಬ ಸುಳಿವು ನೀಡಿದ್ದೇ ಎಂದು ಸಂಶಯ ವ್ಯಕ್ತಪಡಿಸಿದೆ.

ಬಿಜೆಪಿ ಶಾಸಕರ ಆರೋಪದ ಬಗೆಗಿನ ತನಿಖೆಗೆ ರಾಜ್ಯದ ಪೋಲೀಸರ ಬದಲು ಸಿಬಿಐ ತನಿಖೆಗೆ ಆಗ್ರಹಿಸಿಲ್ಲವೇಕೆ? ಸಂಸದರ ಷಡ್ಯಂತ್ರದ ಬಗ್ಗೆ ಮೋದಿಗೆ ದೂರು ಕೊಡಲಿಲ್ಲವೇಕೆ? ತಮ್ಮ ಶಾಸಕರಿಗೆ ಜೀವ ಬೆದರಿಕೆ ಇದ್ದರೂ ಬಿಜೆಪಿ ಮೌನ ವಹಿಸಿರುವುದೇಕೆ? ಎಂದು ಕಾಂಗ್ರೆಸ್‌ ರಾಜ್ಯ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದರು.

ಈ ವಿಚಾರವಾಗಿ ಬೀದರ್ ಎಸ್ ಪಿ ಗೆ ಪತ್ರ ಬರೆದಿರುವ‌ ಕೇಂದ್ರ ಸಚಿವ ಭಗವಂತ ಖೂಬಾ ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

lokesh

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

8 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

12 hours ago