ಬೆಂಗಳೂರು : ಬಿಜೆಪಿಯ ಆಂತರಿಕ ಕಲಹ ಈಗ ಆಂತರಿಕವಾಗಿಲ್ಲ, ಬೀದಿ ಜಗಳವಾಗಿ ಪರಿಣಮಿಸಿದೆʼ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಬಿಜೆಪಿ ಸಂಸದರ ಮೇಲೆ ಕೊಲೆ ಷಡ್ಯಂತ್ರದ ಆರೋಪ ಹೋರಿಸಿದ ನಂತರ ಭಗವಂತ ಖೂಬಾ ಅವರು ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಅಂಟಿಸಿಪೇಟರಿ ಬೇಲ್ ಪಡೆಯುತ್ತಿದ್ದಾರೆ. ಇದರ ಅರ್ಥ ಚೌಹಾಣ್ ಅವರು ಮುಂದೆ ಅಹಿತಕರ ಘಟನೆಯನ್ನು ಎದುರಿಸಬೇಕಾಗುತ್ತದೆ ಎಂಬ ಸುಳಿವು ನೀಡಿದ್ದೇ ಎಂದು ಸಂಶಯ ವ್ಯಕ್ತಪಡಿಸಿದೆ.
ಬಿಜೆಪಿ ಶಾಸಕರ ಆರೋಪದ ಬಗೆಗಿನ ತನಿಖೆಗೆ ರಾಜ್ಯದ ಪೋಲೀಸರ ಬದಲು ಸಿಬಿಐ ತನಿಖೆಗೆ ಆಗ್ರಹಿಸಿಲ್ಲವೇಕೆ? ಸಂಸದರ ಷಡ್ಯಂತ್ರದ ಬಗ್ಗೆ ಮೋದಿಗೆ ದೂರು ಕೊಡಲಿಲ್ಲವೇಕೆ? ತಮ್ಮ ಶಾಸಕರಿಗೆ ಜೀವ ಬೆದರಿಕೆ ಇದ್ದರೂ ಬಿಜೆಪಿ ಮೌನ ವಹಿಸಿರುವುದೇಕೆ? ಎಂದು ಕಾಂಗ್ರೆಸ್ ರಾಜ್ಯ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.
ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದರು.
ಈ ವಿಚಾರವಾಗಿ ಬೀದರ್ ಎಸ್ ಪಿ ಗೆ ಪತ್ರ ಬರೆದಿರುವ ಕೇಂದ್ರ ಸಚಿವ ಭಗವಂತ ಖೂಬಾ ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…