ಬೆಂಗಳೂರು: ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡುತ್ತಾ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ. ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.
ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು? ನಾನು ತೂರಾಡಿದ್ನಾ? ನನಗೂ ಏನು ಮಾಡಬೇಕು, ಮಾಡಬಾರದು ಎಂದು ಗೊತ್ತಿದೆ. ಅಲ್ಲಿನ ತಹಶಿಲ್ದಾರ್ ಅವರಿಗೆ ಪದೇಪದೆ ಫೋನ್ ಕರೆ ಮಾಡಿ ಒತ್ತಡ ಹೇರಿದ್ದಾರೆ. ಏನು ಸಿಕ್ಕಿಲ್ಲ ಅಲ್ಲಿ. ಇಷ್ಟು ಚುನಾವಣೆ ಮಾಡಿದವನಿಗೆ ಏನು ಮಾಡಬೇಕು ಅನ್ನೋದು ಗೊತ್ತಿಲ್ಲವಾ? ಎಂದು ಖಾರವಾಗಿ ಪ್ರಶ್ನಿಸಿದರು.
ನಾವು ಬಿಡದಿ ತೋಟದಲ್ಲಿ ಗ್ಲಾಸ್ ಇಟ್ಟು ಪಾರ್ಟಿ ಮಾಡ್ತಿಲ್ಲ, ಹಾಗೆ ಮಾಡೋದು ಕಾಂಗ್ರೆಸ್ ಸಂಸ್ಕೃತಿ. ಅಂತಹ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ಆರೋಪ ಮಾಡಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…