ರಾಜಕೀಯ

ಕಾಂಗ್ರೆಸ್ ಆಫೀಸ್ ಅನ್ನು ನಾನು ಹೆಡ್ಡಾಫೀಸ್ ಮಾಡಿಕೊಳ್ಳಲು ಆಗುತ್ತದೆಯೇ : ಹೆಚ್‌ಡಿಕೆ ಪ್ರಶ್ನೆ !

  • ಕಾಂಗ್ರೆಸ್ ಟೀಕೆಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
  • ಮೇಕೆದಾಟು ಪಾದಯಾತ್ರೆಯಲ್ಲಿ ನಾನು ತೂರಾಡಿದ್ನಾ?
  • ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ : ಹೆಚ್‌ಡಿಕೆ

ಬೆಂಗಳೂರು: ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡುತ್ತಾ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ. ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.

ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು? ನಾನು ತೂರಾಡಿದ್ನಾ? ನನಗೂ ಏನು ಮಾಡಬೇಕು, ಮಾಡಬಾರದು ಎಂದು ಗೊತ್ತಿದೆ. ಅಲ್ಲಿನ ತಹಶಿಲ್ದಾರ್ ಅವರಿಗೆ ಪದೇಪದೆ ಫೋನ್ ಕರೆ ಮಾಡಿ ಒತ್ತಡ ಹೇರಿದ್ದಾರೆ. ಏನು ಸಿಕ್ಕಿಲ್ಲ ಅಲ್ಲಿ. ಇಷ್ಟು ಚುನಾವಣೆ ಮಾಡಿದವನಿಗೆ ಏನು ಮಾಡಬೇಕು ಅನ್ನೋದು ಗೊತ್ತಿಲ್ಲವಾ? ಎಂದು ಖಾರವಾಗಿ ಪ್ರಶ್ನಿಸಿದರು.

ನಾವು ಬಿಡದಿ ತೋಟದಲ್ಲಿ ಗ್ಲಾಸ್ ಇಟ್ಟು ಪಾರ್ಟಿ ಮಾಡ್ತಿಲ್ಲ, ಹಾಗೆ ಮಾಡೋದು ಕಾಂಗ್ರೆಸ್ ಸಂಸ್ಕೃತಿ. ಅಂತಹ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು  ಆರೋಪ ಮಾಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago