ಬೆಂಗಳೂರು: ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡುತ್ತಾ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ. ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.
ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು? ನಾನು ತೂರಾಡಿದ್ನಾ? ನನಗೂ ಏನು ಮಾಡಬೇಕು, ಮಾಡಬಾರದು ಎಂದು ಗೊತ್ತಿದೆ. ಅಲ್ಲಿನ ತಹಶಿಲ್ದಾರ್ ಅವರಿಗೆ ಪದೇಪದೆ ಫೋನ್ ಕರೆ ಮಾಡಿ ಒತ್ತಡ ಹೇರಿದ್ದಾರೆ. ಏನು ಸಿಕ್ಕಿಲ್ಲ ಅಲ್ಲಿ. ಇಷ್ಟು ಚುನಾವಣೆ ಮಾಡಿದವನಿಗೆ ಏನು ಮಾಡಬೇಕು ಅನ್ನೋದು ಗೊತ್ತಿಲ್ಲವಾ? ಎಂದು ಖಾರವಾಗಿ ಪ್ರಶ್ನಿಸಿದರು.
ನಾವು ಬಿಡದಿ ತೋಟದಲ್ಲಿ ಗ್ಲಾಸ್ ಇಟ್ಟು ಪಾರ್ಟಿ ಮಾಡ್ತಿಲ್ಲ, ಹಾಗೆ ಮಾಡೋದು ಕಾಂಗ್ರೆಸ್ ಸಂಸ್ಕೃತಿ. ಅಂತಹ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ಆರೋಪ ಮಾಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…