ರಾಜಕೀಯ

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು ಪ್ರಕರಣ:‌ ಸಿಎಂ, ಡಿಸಿಎಂ, ರಾಹುಲ್‌ ಗಾಂಧಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್‌ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಚಾರದ ರೇಟ್‌ ಕಾರ್ಡ್‌ ಜಾಹೀರಾತು ನೀಡಿದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಏಪ್ರಿಲ್‌ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದರೆ, ರಾಹುಲ್‌ ಗಾಂಧಿಗೆ ಜೂನ್‌ 1ಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್‌ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚಿಸಿದರೆ, ಸಿಎಂಗೆ ಸಮನ್ಸ್‌ ಜಾರಿ ಮಾಡಲು ಹೈಗ್ರೌಂಡ್ಸ್‌ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜೂನ್‌ 1ರಂದು ಹಾಜರಾಗಲ ರಾಹುಲ್‌ಗೆ ಸೂಚನೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ರಾಹುಲ್‌ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್‌ ಗಾಂಧಿ ಅವರು ಜೂನ್‌ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಮೂರ್ತಿ ಜೆ.ಪ್ರೀತ್‌ ಅವರು ಆದೇಶಿಸಿದ್ದಾರೆ.

ಜಾಹೀರಾತು ವಿರುದ್ಧ ದೂರ ನೀಡಿದ್ದ ಬಿಜೆಪಿ

ಹಿಂದಿನ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್.‌ ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ರಾಹುಲ್‌ ಗಾಂಧಿ ಸೇರಿದಂತೆ ಕೆಪಿಸಿಸಿಯ ಮತ್ತಿತರರನ್ನು ವಿರುದ್ಧ ದೂರು ದಾಖಲು ಮಾಡಲಾಗಿತ್ತು

andolana

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago