ರಾಜಕೀಯ

ಸಿಪಿ ಯೋಗೇಶ್ವರ್‌ ಭಾವ ನಾಪತ್ತೆ ಕೇಸ್‌ : ಚಾಮರಾಜನಗರದಲ್ಲಿ ಕಾರು ಪತ್ತೆ

ಚಾಮರಾಜನಗರ : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯನವರು ನಾಪತ್ತೆಯಾಗಿ ಎರಡ್ಮೂರು ದಿನಗಳೇ ಕಳೆದರೂ ಕೂಡ ಪತ್ತೆಯಾಗಿಲ್ಲ. ಇದೀಗ ಅವರ ಕಾರು ಚಾಮರಾಜನಗರದ ಬಳಿ ಪತ್ತೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿದೆ. ಈ ಕಾರಿನ ಟೈ ಲ್ಯಾಂಪ್‌ ಮೇಲೆ ರಕ್ತದ ಕಲೆಗಳಿವೆ. ಸಧ್ಯ ಕಾರು ಪತ್ತೆಯಾಗಿರುವ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹದೇವಯ್ಯನವರು ರಾಮಾಪುರಕ್ಕೆ ಏಕೆ ಬಂದಿದ್ದರು ? ಕಾರನ್ನು ಯಾರು ಚಲಾಯಿಸಿಕೊಂಡು ಬಂದಿದ್ದರು ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಮಹದೇವಯ್ಯನವರನ್ನು ಪತ್ತೆ ಹಚ್ಚಲು ಈಗಾಗಲೇ ಚನ್ನಪಟ್ಟಣ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಇನ್ನು ಮಹದೇವಯ್ಯ ಅವರ ಮೊಬೈಲ್‌ ಲೊಕೇಶನ್‌ ಅನ್ನೂ ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಒಂದು ಬಾರಿ ಮಾತ್ರ ಯಾರೋ ಅಪರಿಚಿತರು ಫೋನ್‌ ರಿಸೀವ್‌ ಮಾಡಿದ್ದಾರೆ. ನಂತರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.

ಕಳೆದ ಶನಿವಾರ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ರಾಮನಗರದ ಚಳ್ಳಕೆರೆಯಲ್ಲಿರುವ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಶನಿವಾರ ಬೆಳಗ್ಗೆಯಿಂದಲೂ ನಾಪತ್ತೆಯಾಗಿದ್ದರು.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿರುವ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲದೇ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿತ್ತು ಇದರಿಂದ ಮಹದೇವಯ್ಯ ಅವರು ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿತ್ತು.

lokesh

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

2 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

2 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

2 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

2 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

2 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

4 hours ago