ರಾಜಕೀಯ

ಸಿಪಿ ಯೋಗೇಶ್ವರ್‌ ಭಾವ ನಾಪತ್ತೆ ಕೇಸ್‌ : ಚಾಮರಾಜನಗರದಲ್ಲಿ ಕಾರು ಪತ್ತೆ

ಚಾಮರಾಜನಗರ : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯನವರು ನಾಪತ್ತೆಯಾಗಿ ಎರಡ್ಮೂರು ದಿನಗಳೇ ಕಳೆದರೂ ಕೂಡ ಪತ್ತೆಯಾಗಿಲ್ಲ. ಇದೀಗ ಅವರ ಕಾರು ಚಾಮರಾಜನಗರದ ಬಳಿ ಪತ್ತೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿದೆ. ಈ ಕಾರಿನ ಟೈ ಲ್ಯಾಂಪ್‌ ಮೇಲೆ ರಕ್ತದ ಕಲೆಗಳಿವೆ. ಸಧ್ಯ ಕಾರು ಪತ್ತೆಯಾಗಿರುವ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹದೇವಯ್ಯನವರು ರಾಮಾಪುರಕ್ಕೆ ಏಕೆ ಬಂದಿದ್ದರು ? ಕಾರನ್ನು ಯಾರು ಚಲಾಯಿಸಿಕೊಂಡು ಬಂದಿದ್ದರು ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಮಹದೇವಯ್ಯನವರನ್ನು ಪತ್ತೆ ಹಚ್ಚಲು ಈಗಾಗಲೇ ಚನ್ನಪಟ್ಟಣ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಇನ್ನು ಮಹದೇವಯ್ಯ ಅವರ ಮೊಬೈಲ್‌ ಲೊಕೇಶನ್‌ ಅನ್ನೂ ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಒಂದು ಬಾರಿ ಮಾತ್ರ ಯಾರೋ ಅಪರಿಚಿತರು ಫೋನ್‌ ರಿಸೀವ್‌ ಮಾಡಿದ್ದಾರೆ. ನಂತರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.

ಕಳೆದ ಶನಿವಾರ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ರಾಮನಗರದ ಚಳ್ಳಕೆರೆಯಲ್ಲಿರುವ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಶನಿವಾರ ಬೆಳಗ್ಗೆಯಿಂದಲೂ ನಾಪತ್ತೆಯಾಗಿದ್ದರು.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿರುವ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲದೇ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿತ್ತು ಇದರಿಂದ ಮಹದೇವಯ್ಯ ಅವರು ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿತ್ತು.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago