ರಾಜಕೀಯ

ಡಿಕೆಶಿ ಟೆಂಟಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ : ಎಚ್ ಡಿ ಕುಮಾರಸ್ವಾಮಿ

ಚಿಕ್ಕಮಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊದಲು ಟೆಂಟ್ ನಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ ಎಂದು ಮಾಜಿ ಸಿಎಂ ಎಚ್ ಡಿಕೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೆಂಟ್ ಕಳ್ಳ ಎಂದು ಕಾಂಗ್ರೆಸ್ ಪೋಸ್ಟರ್ ಬಿಡುಗಡೆ ಮಾಡಿದ್ದಕ್ಕೆ ಗರಂ ಆಗಿದ್ದು, ಡಿಕೆ ಶಿವಕುಮಾರ್ ಅವರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಅವನು ಟೆಂಟಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ. ಆ ಮನಸ್ಥಿತಿಯಲ್ಲಿರುವ ಅವನಿಗೆ ಅವನಿಗೆ ಇನ್ನೇನು ಬರುತ್ತೆ?

ಸಾತನೂರಲ್ಲಿ 2 ಟೆಂಟ್ ಇದ್ವಲ್ಲಾ ಅಲ್ಲಿ ಮಲಯಾಳಂ ಬ್ಲೂ ಸಿನಿಮಾಗಳ ರೀಲ್ ಜೋಡಿಸುತ್ತಿದ್ದ. ನಾನು ಆ ರೀತಿಯ ಜೀವನ ಮಾಡಿಕೊಂಡು ಬಂದಿಲ್ಲ, ಅವನು ಬಂದಿರುವುದೇ ಆ ಸಂಸ್ಕೃತಿಯಲ್ಲಿ ಅಂತಹವರನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. ನಾಯಕರು ಅವರಿಗೆ ಅಧಿಕಾರ ಕೊಟ್ಟಿದ್ದಾರೆ.

ಆ ತರಹದ ಪೋಸ್ಟರ್ ಪ್ರಿಪೇರ್ ಮಾಡಿಸಲು ನಮಗೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಕೂಡ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು .

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದರು. ನಿಮಗಾಗಿರುವ ಧನದಾಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದರು.

lokesh

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

4 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

6 hours ago