ರಾಜಕೀಯ

ಡಿಕೆಶಿ ಸಿಎಂ ಆಗ್ತಾರೆ : ಶಿವ ಯೋಗೇಶ್ವರ ಸ್ವಾಮೀಜಿ

ಮಂಡ್ಯ : ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ವಾಣಿ ನುಡಿದಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನ ಕುದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವದಲ್ಲಿ ಭಾಗಿಯಾಗಿದ್ದ ನೊಣವಿನಕೆರೆ ಕಾಡಸಿದ್ದೇಶ್ವರ ಮಠಾಧ್ಯಕ್ಷರಾದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿಗಳು ಮಾದ್ಯಮಗಳೊಂದಿಗೆ ಮಾತನಾಡಿದ್ದು, ಡಿಕೆ ಶಿವಕುಮಾರ್‌ ಅವರು ಮುಖ್ಯಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

ಸರ್ಕಾರ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ಮೀಸಲಾತಿ ಪ್ರಕಟಿಸುವುದು ಒಳ್ಳೆಯದು. ಅದು ಎಲ್ಲಾ ಸಮುದಾಯದವರಿಗೂ ಅನುಕೂಲವಾಗುತ್ತದೆ. ಎಲ್ಲಾ ಸಮುದಾಯಗಳು ಇನ್ನಷ್ಟು ಹೆಚ್ಚಾಗಿ ಸಂಘಟನೆಯಲ್ಲಿ ಬೆಳೆಯುವವರಿಗೆ ರಾಜಕೀಯದಲ್ಲಿಯೂ ಮೀಸಲಾತಿ ಕೊಟ್ಟು ಮುಂದುವರಿಯುವುದು ಉತ್ತಮ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುವ ಎಲ್ಲಾ ಅವಕಾಶಗಳಿವೆ. ಡಿ.ಕೆ. ಶಿವಕುಮಾರ್ ಅವರು ಶ್ರೀಮಠದ ಪರಮ ಭಕ್ತರಾಗಿದ್ದಾರೆ ಎಂದಿದ್ದಾರೆ.

ಶ್ರೀಗಳು ಈ ಹಿಂದೆ ನುಡಿದಿದ್ದ ಅನೇಕರ ರಾಜಕೀಯ ಭವಿಷ್ಯ ನಿಜವಾಗಿದೆ. ಬಸವರಾಜ ಬೊಮ್ಮಾಯಿಯವರು ಕೂಡ ಮುಖ್ಯಮಂತ್ರಿಗಳಾಗುವ ಮೊದಲು ಶ್ರೀ ಮಠಕ್ಕೆ ಭೇಟಿ ನೀಡಿದ್ದರು. ಆ ವೇಳೆ ಬೊಮ್ಮಾಯಿ ಸಿಎಂ ಆಗ್ತಾರೆ ಎಂದು ಶ್ರೀಗಳು ಭವಿಷ್ಯ ಹೇಳಿದ್ದರು. ಅದು ಮುಂದಿನ ದಿನಗಳಲ್ಲಿ ನಿಜವಾಗಿತ್ತು.

ಸದ್ಯ ರಾಜ್ಯದಲ್ಲಿ ಸಿಎಂ, ಡಿಸಿಎಂ, ದಲಿತ ಸಿಎಂ ವಿಚಾರಗಳು ತಣ್ಣಾಗಾಯಿತು ಎನ್ನುವ ಹೊತ್ತಲ್ಲೇ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿಗಳು ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತೆ ಸಿಎಂ ಚರ್ಚೆಯನ್ನು ಹುಟ್ಟುಹಾಕಿದೆ.

ಶ್ರೀಗಳು ಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುರಿತಾಗಿ ನುಡಿದಿರುವ ಭವಿಷ್ಯ ವಾಣಿ ಮುಂದಿನ ದಿನಗಳಲ್ಲಿ ನಿಜವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago