ರಾಜಕೀಯ

ಡಿಕೆಶಿ ಸಿಎಂ ಆಗ್ತಾರೆ : ಶಿವ ಯೋಗೇಶ್ವರ ಸ್ವಾಮೀಜಿ

ಮಂಡ್ಯ : ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ವಾಣಿ ನುಡಿದಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನ ಕುದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವದಲ್ಲಿ ಭಾಗಿಯಾಗಿದ್ದ ನೊಣವಿನಕೆರೆ ಕಾಡಸಿದ್ದೇಶ್ವರ ಮಠಾಧ್ಯಕ್ಷರಾದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿಗಳು ಮಾದ್ಯಮಗಳೊಂದಿಗೆ ಮಾತನಾಡಿದ್ದು, ಡಿಕೆ ಶಿವಕುಮಾರ್‌ ಅವರು ಮುಖ್ಯಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

ಸರ್ಕಾರ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ಮೀಸಲಾತಿ ಪ್ರಕಟಿಸುವುದು ಒಳ್ಳೆಯದು. ಅದು ಎಲ್ಲಾ ಸಮುದಾಯದವರಿಗೂ ಅನುಕೂಲವಾಗುತ್ತದೆ. ಎಲ್ಲಾ ಸಮುದಾಯಗಳು ಇನ್ನಷ್ಟು ಹೆಚ್ಚಾಗಿ ಸಂಘಟನೆಯಲ್ಲಿ ಬೆಳೆಯುವವರಿಗೆ ರಾಜಕೀಯದಲ್ಲಿಯೂ ಮೀಸಲಾತಿ ಕೊಟ್ಟು ಮುಂದುವರಿಯುವುದು ಉತ್ತಮ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುವ ಎಲ್ಲಾ ಅವಕಾಶಗಳಿವೆ. ಡಿ.ಕೆ. ಶಿವಕುಮಾರ್ ಅವರು ಶ್ರೀಮಠದ ಪರಮ ಭಕ್ತರಾಗಿದ್ದಾರೆ ಎಂದಿದ್ದಾರೆ.

ಶ್ರೀಗಳು ಈ ಹಿಂದೆ ನುಡಿದಿದ್ದ ಅನೇಕರ ರಾಜಕೀಯ ಭವಿಷ್ಯ ನಿಜವಾಗಿದೆ. ಬಸವರಾಜ ಬೊಮ್ಮಾಯಿಯವರು ಕೂಡ ಮುಖ್ಯಮಂತ್ರಿಗಳಾಗುವ ಮೊದಲು ಶ್ರೀ ಮಠಕ್ಕೆ ಭೇಟಿ ನೀಡಿದ್ದರು. ಆ ವೇಳೆ ಬೊಮ್ಮಾಯಿ ಸಿಎಂ ಆಗ್ತಾರೆ ಎಂದು ಶ್ರೀಗಳು ಭವಿಷ್ಯ ಹೇಳಿದ್ದರು. ಅದು ಮುಂದಿನ ದಿನಗಳಲ್ಲಿ ನಿಜವಾಗಿತ್ತು.

ಸದ್ಯ ರಾಜ್ಯದಲ್ಲಿ ಸಿಎಂ, ಡಿಸಿಎಂ, ದಲಿತ ಸಿಎಂ ವಿಚಾರಗಳು ತಣ್ಣಾಗಾಯಿತು ಎನ್ನುವ ಹೊತ್ತಲ್ಲೇ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿಗಳು ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತೆ ಸಿಎಂ ಚರ್ಚೆಯನ್ನು ಹುಟ್ಟುಹಾಕಿದೆ.

ಶ್ರೀಗಳು ಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುರಿತಾಗಿ ನುಡಿದಿರುವ ಭವಿಷ್ಯ ವಾಣಿ ಮುಂದಿನ ದಿನಗಳಲ್ಲಿ ನಿಜವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

lokesh

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

35 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago