ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಶಾಸಕ ಸಂತೋಷ್ ಬಂಗಾರ್ ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ʼಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಎರಡು ದಿನ ಊಟ ಮಾಡಬೇಡಿʼ ಎಂದು ಹೇಳಿಕೆ ನೀಡುವುದರ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಹಿಂಗೋಳಿ ಜಿಲ್ಲೆಯ ಜಿಲ್ಲಾ ಪರಿಷತ್ ಶಾಲೆಗೆ ಭೇಟಿ ನೀಡಿದಾಗ ಮಕ್ಕಳನ್ನು ಉದ್ದೇಶಿಸಿ ಸಂತೋಷ್ ಬಂಗಾರ್ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಡಿಯೊ ವೀಕ್ಷಿಸಿದ ನೆಟ್ಟಿಗರು ಕಿಡಿಕಾರಿದ್ದಾರೆ. ʼನಿಮ್ಮ ಪೋಷಕರು ಏಕೆ ಊಟ ಮಾಡುತ್ತಿಲ್ಲ ಎಂದು ಕೇಳಿದರೆ ಸಂತೋಷ್ ಬಂಗಾರ್ಗೆ ಮತ ಹಾಕಿ, ಊಟ ಮಾಡುತ್ತೇವೆ ಎಂದು ಹೇಳಿʼ ಎಂದೂ ಸಹ ಹೇಳಿದ್ದಾರೆ.
ಅಲ್ಲದೇ ನಿಮ್ಮ ಅಪ್ಪ – ಅಮ್ಮ ಮುಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂದು ಮಕ್ಕಳಿಗೆ ಪ್ರಶ್ನೆ ಕೇಳಿರುವ ಸಂತೋಷ್ ಬಂಗಾರ್ ಮಕ್ಕಳಿಂದ ತಮ್ಮ ಹೆಸರನ್ನು ಹೇಳಿಸಿದ್ದಾರೆ. ಈ ವಿಡಿಯೊ ಶೇರ್ ಮಾಡಿರುವ ಕಾಂಗ್ರೆಸ್ ಹಾಗೂ ಎನ್ಸಿಪಿ – ಎಸ್ಪಿ ಪಕ್ಷದ ನಾಯಕರು ಸಂತೋಷ್ ಬಂಗಾರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…