ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಶಾಸಕ ಸಂತೋಷ್ ಬಂಗಾರ್ ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ʼಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಎರಡು ದಿನ ಊಟ ಮಾಡಬೇಡಿʼ ಎಂದು ಹೇಳಿಕೆ ನೀಡುವುದರ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಹಿಂಗೋಳಿ ಜಿಲ್ಲೆಯ ಜಿಲ್ಲಾ ಪರಿಷತ್ ಶಾಲೆಗೆ ಭೇಟಿ ನೀಡಿದಾಗ ಮಕ್ಕಳನ್ನು ಉದ್ದೇಶಿಸಿ ಸಂತೋಷ್ ಬಂಗಾರ್ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಡಿಯೊ ವೀಕ್ಷಿಸಿದ ನೆಟ್ಟಿಗರು ಕಿಡಿಕಾರಿದ್ದಾರೆ. ʼನಿಮ್ಮ ಪೋಷಕರು ಏಕೆ ಊಟ ಮಾಡುತ್ತಿಲ್ಲ ಎಂದು ಕೇಳಿದರೆ ಸಂತೋಷ್ ಬಂಗಾರ್ಗೆ ಮತ ಹಾಕಿ, ಊಟ ಮಾಡುತ್ತೇವೆ ಎಂದು ಹೇಳಿʼ ಎಂದೂ ಸಹ ಹೇಳಿದ್ದಾರೆ.
ಅಲ್ಲದೇ ನಿಮ್ಮ ಅಪ್ಪ – ಅಮ್ಮ ಮುಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂದು ಮಕ್ಕಳಿಗೆ ಪ್ರಶ್ನೆ ಕೇಳಿರುವ ಸಂತೋಷ್ ಬಂಗಾರ್ ಮಕ್ಕಳಿಂದ ತಮ್ಮ ಹೆಸರನ್ನು ಹೇಳಿಸಿದ್ದಾರೆ. ಈ ವಿಡಿಯೊ ಶೇರ್ ಮಾಡಿರುವ ಕಾಂಗ್ರೆಸ್ ಹಾಗೂ ಎನ್ಸಿಪಿ – ಎಸ್ಪಿ ಪಕ್ಷದ ನಾಯಕರು ಸಂತೋಷ್ ಬಂಗಾರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…