ಚೆನೈ :ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ದೇಶವನ್ನು ಆಳಲು ಇನ್ನೊಂದು ಅವಕಾಶ ನೀಡಬೇಡಿ ಎಂದು ಮಕ್ಕಳ್ ನೀದಿ ಮೈಯ್ಯಮ್ (ಎಂಎನ್ಎಂ)ನ ಸ್ಥಾಪಕ ನಟ ಕಮಲ್ ಹಾಸನ್ ಅವರು ಆಗ್ರಹಿಸಿದ್ದಾರೆ.
ವಿಸಿಕೆ ಅಧ್ಯಕ್ಷ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಚಿದಂಬರಂ ಲೋಕಸಭಾ ಕ್ಷೇತ್ರ (ಮೀಸಲು) ದ ಅಭ್ಯರ್ಥಿ ತೋಲ್ ತಿರುಮಾವಲವನ್ ಅವರ ಪರವಾಗಿ ಚಿದಂಬರಂನಲ್ಲಿ ಬುಧವಾರ ರಾತ್ರಿ ಕಮಲ್ ಹಾಸನ್ ಪ್ರಚಾರ ನಡೆಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸಂಪೂರ್ಣವಾಗಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಬಿಜೆಪಿ ಕೂಡ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ದೇಶ ಪ್ರಜಾಪ್ರಭುತ್ವದ ತತ್ವಗಳಿಂದ ಸಂಪೂರ್ಣವಾಗಿ ವಂಚಿತವಾಗಲಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಪ್ರಜಾಪ್ರಭುತ್ವ ಅತಿ ದೊಡ್ಡ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ತಾನು ಕೈಜೋಡಿಸಿದ್ದೇನೆ ಎಂದು ಅವರು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್ಗಳನ್ನು…