ಚೆನೈ :ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ದೇಶವನ್ನು ಆಳಲು ಇನ್ನೊಂದು ಅವಕಾಶ ನೀಡಬೇಡಿ ಎಂದು ಮಕ್ಕಳ್ ನೀದಿ ಮೈಯ್ಯಮ್ (ಎಂಎನ್ಎಂ)ನ ಸ್ಥಾಪಕ ನಟ ಕಮಲ್ ಹಾಸನ್ ಅವರು ಆಗ್ರಹಿಸಿದ್ದಾರೆ.
ವಿಸಿಕೆ ಅಧ್ಯಕ್ಷ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಚಿದಂಬರಂ ಲೋಕಸಭಾ ಕ್ಷೇತ್ರ (ಮೀಸಲು) ದ ಅಭ್ಯರ್ಥಿ ತೋಲ್ ತಿರುಮಾವಲವನ್ ಅವರ ಪರವಾಗಿ ಚಿದಂಬರಂನಲ್ಲಿ ಬುಧವಾರ ರಾತ್ರಿ ಕಮಲ್ ಹಾಸನ್ ಪ್ರಚಾರ ನಡೆಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸಂಪೂರ್ಣವಾಗಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಬಿಜೆಪಿ ಕೂಡ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ದೇಶ ಪ್ರಜಾಪ್ರಭುತ್ವದ ತತ್ವಗಳಿಂದ ಸಂಪೂರ್ಣವಾಗಿ ವಂಚಿತವಾಗಲಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಪ್ರಜಾಪ್ರಭುತ್ವ ಅತಿ ದೊಡ್ಡ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ತಾನು ಕೈಜೋಡಿಸಿದ್ದೇನೆ ಎಂದು ಅವರು ಹೇಳಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…