ಚೆನೈ :ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ದೇಶವನ್ನು ಆಳಲು ಇನ್ನೊಂದು ಅವಕಾಶ ನೀಡಬೇಡಿ ಎಂದು ಮಕ್ಕಳ್ ನೀದಿ ಮೈಯ್ಯಮ್ (ಎಂಎನ್ಎಂ)ನ ಸ್ಥಾಪಕ ನಟ ಕಮಲ್ ಹಾಸನ್ ಅವರು ಆಗ್ರಹಿಸಿದ್ದಾರೆ.
ವಿಸಿಕೆ ಅಧ್ಯಕ್ಷ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಚಿದಂಬರಂ ಲೋಕಸಭಾ ಕ್ಷೇತ್ರ (ಮೀಸಲು) ದ ಅಭ್ಯರ್ಥಿ ತೋಲ್ ತಿರುಮಾವಲವನ್ ಅವರ ಪರವಾಗಿ ಚಿದಂಬರಂನಲ್ಲಿ ಬುಧವಾರ ರಾತ್ರಿ ಕಮಲ್ ಹಾಸನ್ ಪ್ರಚಾರ ನಡೆಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸಂಪೂರ್ಣವಾಗಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಬಿಜೆಪಿ ಕೂಡ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ದೇಶ ಪ್ರಜಾಪ್ರಭುತ್ವದ ತತ್ವಗಳಿಂದ ಸಂಪೂರ್ಣವಾಗಿ ವಂಚಿತವಾಗಲಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಪ್ರಜಾಪ್ರಭುತ್ವ ಅತಿ ದೊಡ್ಡ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ತಾನು ಕೈಜೋಡಿಸಿದ್ದೇನೆ ಎಂದು ಅವರು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…