ಚೆನೈ :ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ದೇಶವನ್ನು ಆಳಲು ಇನ್ನೊಂದು ಅವಕಾಶ ನೀಡಬೇಡಿ ಎಂದು ಮಕ್ಕಳ್ ನೀದಿ ಮೈಯ್ಯಮ್ (ಎಂಎನ್ಎಂ)ನ ಸ್ಥಾಪಕ ನಟ ಕಮಲ್ ಹಾಸನ್ ಅವರು ಆಗ್ರಹಿಸಿದ್ದಾರೆ.
ವಿಸಿಕೆ ಅಧ್ಯಕ್ಷ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಚಿದಂಬರಂ ಲೋಕಸಭಾ ಕ್ಷೇತ್ರ (ಮೀಸಲು) ದ ಅಭ್ಯರ್ಥಿ ತೋಲ್ ತಿರುಮಾವಲವನ್ ಅವರ ಪರವಾಗಿ ಚಿದಂಬರಂನಲ್ಲಿ ಬುಧವಾರ ರಾತ್ರಿ ಕಮಲ್ ಹಾಸನ್ ಪ್ರಚಾರ ನಡೆಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸಂಪೂರ್ಣವಾಗಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಬಿಜೆಪಿ ಕೂಡ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ದೇಶ ಪ್ರಜಾಪ್ರಭುತ್ವದ ತತ್ವಗಳಿಂದ ಸಂಪೂರ್ಣವಾಗಿ ವಂಚಿತವಾಗಲಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಪ್ರಜಾಪ್ರಭುತ್ವ ಅತಿ ದೊಡ್ಡ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ತಾನು ಕೈಜೋಡಿಸಿದ್ದೇನೆ ಎಂದು ಅವರು ಹೇಳಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…