ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಪ್ರಚಾರದಲ್ಲಿ ಸಿನಿ ಕಲಾವಿದ ಹಾಗೂ ರಾಜ್ಯಸಭಾ ಸದಸ್ಯನಾಗಿರುವ ಜಗ್ಗೇಶ್ ಸಹ ಭಾಗವಹಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದರು. ʼಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿಗಳನ್ನು ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಮ್ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀಬೀಸ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆʼ ಎಂದು ಜಗ್ಗೇಶ್ ಹೇಳಿಕೆ ನೀಡಿದರು.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…