ರಾಜಕೀಯ

ಹಾಸ್ಮೀಂ ಒಬ್ಬ ಕೊಲೆ ಆರೋಪಿ : ಯತ್ನಾಳ್‌ ಆರೋಪ

ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ ಮುಸ್ಲಿಂ ಧರ್ಮಗುರು ಸಯ್ಯದ್‌ ಮೊಹಮ್ಮದ್‌ ತನ್ವೀರ್‌ ಹಾಸ್ಮೀಂ ಅವರ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಾಲು ಸಾಲು ಆರೋಪ ಮಾಡುತ್ತಿದ್ದಾರೆ.

ಹಾಸ್ಮೀಂ ಅವರಿಗೆ ಉಗ್ರರ ಜೊತೆ ನಂಟಿದೆ ಎಂದು ಆರೋಪಿಸಿದ್ದ ಯತ್ನಾಳ್‌ ಇದೀಗ ಮತ್ತೊಂದು ಬಾಂಬ್‌ ಸಿಡಿಸಿದ್ದು, ತನ್ವೀರ್‌ ಪೀರಾ ಹಾಸ್ಮೀಂ ಅವರು ಕೊಲೆ ಪ್ರಕರಣವೊಂದರ ಆರೋಪಿಯಾಗಿದ್ದಾರೆ ಎಂದಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌, ತನ್ವೀರ್‌ ಪೀರಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿತನಾಗಿದ್ದಾರೆ ಎಂದು ಹೇಳಿದ್ದು, ಕೊಲೆಯಾಗಿರುವ ವ್ಯಕ್ತಿಯ ಹೆಂಡತಿ ಸಾಕ್ಷ್ಯ ನಾಶ ಮಾಡುವುದಲ್ಲದೇ ನಮ್ಮ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಯತ್ನಾಳ್‌ ಅವರ ಆರೋಪದ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದ ತನ್ವೀರ್‌ ಹಾಸ್ಮೀಂ ಅವರು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ್‌ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ಈ ದೇಶವನ್ನೇ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಒಂದು ವೇಳೆ ಆರೋಪ ಸಾಬೀತು ಮಾಡುವಲ್ಲಿ ವಿಫಲವಾದರೆ ಯತ್ನಾಳ್‌ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾಕಿಸ್ತಾನಕ್ಕೆ ಫಲಾಯನ ಮಾಡಬೇಕು ಎಂದು ಸವಾಲು ಹಾಕಿದ್ದರು.

ಯತ್ನಾಳ್‌ ಅವರು ನನಗೆ ಐಸಿಸ್‌ ಜೊತೆ ನಂಟಿದೆ ಎಂದು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್‌ ಬುಕ್‌ ಖಾತೆಗೆ ನಾನೇ ಅಪ್ಲೋಡ್‌ ಮಾಡಿದ್ದೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್‌ ನ ಬಾಗ್ದಾದ್‌ ಗೆ ತೆರಳಿದ್ದೆ. ಆಗ ತೆಗೆದಿರುವ ಫೊಟೋಗಳು ಎಂದಿದ್ದರು.

ಇದೀಗ ಯತ್ನಾಳ್‌ ಅವರು ಮತ್ತೆ ತನ್ವೀರ್‌ ಹಾಸ್ಮೀಂ ಅವರ ವಿರುದ್ಧ ಹೊಸ ಆರೋಪ ಮಾಡಿದ್ದಾರೆ.

lokesh

Recent Posts

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

7 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

49 mins ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

51 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

57 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

4 hours ago