ರಾಜಕೀಯ

ಹಾಸ್ಮೀಂ ಒಬ್ಬ ಕೊಲೆ ಆರೋಪಿ : ಯತ್ನಾಳ್‌ ಆರೋಪ

ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ ಮುಸ್ಲಿಂ ಧರ್ಮಗುರು ಸಯ್ಯದ್‌ ಮೊಹಮ್ಮದ್‌ ತನ್ವೀರ್‌ ಹಾಸ್ಮೀಂ ಅವರ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಾಲು ಸಾಲು ಆರೋಪ ಮಾಡುತ್ತಿದ್ದಾರೆ.

ಹಾಸ್ಮೀಂ ಅವರಿಗೆ ಉಗ್ರರ ಜೊತೆ ನಂಟಿದೆ ಎಂದು ಆರೋಪಿಸಿದ್ದ ಯತ್ನಾಳ್‌ ಇದೀಗ ಮತ್ತೊಂದು ಬಾಂಬ್‌ ಸಿಡಿಸಿದ್ದು, ತನ್ವೀರ್‌ ಪೀರಾ ಹಾಸ್ಮೀಂ ಅವರು ಕೊಲೆ ಪ್ರಕರಣವೊಂದರ ಆರೋಪಿಯಾಗಿದ್ದಾರೆ ಎಂದಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌, ತನ್ವೀರ್‌ ಪೀರಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿತನಾಗಿದ್ದಾರೆ ಎಂದು ಹೇಳಿದ್ದು, ಕೊಲೆಯಾಗಿರುವ ವ್ಯಕ್ತಿಯ ಹೆಂಡತಿ ಸಾಕ್ಷ್ಯ ನಾಶ ಮಾಡುವುದಲ್ಲದೇ ನಮ್ಮ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಯತ್ನಾಳ್‌ ಅವರ ಆರೋಪದ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದ ತನ್ವೀರ್‌ ಹಾಸ್ಮೀಂ ಅವರು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ್‌ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ಈ ದೇಶವನ್ನೇ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಒಂದು ವೇಳೆ ಆರೋಪ ಸಾಬೀತು ಮಾಡುವಲ್ಲಿ ವಿಫಲವಾದರೆ ಯತ್ನಾಳ್‌ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾಕಿಸ್ತಾನಕ್ಕೆ ಫಲಾಯನ ಮಾಡಬೇಕು ಎಂದು ಸವಾಲು ಹಾಕಿದ್ದರು.

ಯತ್ನಾಳ್‌ ಅವರು ನನಗೆ ಐಸಿಸ್‌ ಜೊತೆ ನಂಟಿದೆ ಎಂದು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್‌ ಬುಕ್‌ ಖಾತೆಗೆ ನಾನೇ ಅಪ್ಲೋಡ್‌ ಮಾಡಿದ್ದೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್‌ ನ ಬಾಗ್ದಾದ್‌ ಗೆ ತೆರಳಿದ್ದೆ. ಆಗ ತೆಗೆದಿರುವ ಫೊಟೋಗಳು ಎಂದಿದ್ದರು.

ಇದೀಗ ಯತ್ನಾಳ್‌ ಅವರು ಮತ್ತೆ ತನ್ವೀರ್‌ ಹಾಸ್ಮೀಂ ಅವರ ವಿರುದ್ಧ ಹೊಸ ಆರೋಪ ಮಾಡಿದ್ದಾರೆ.

lokesh

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago