ರಾಜಕೀಯ

ಹಾಸ್ಮೀಂ ಒಬ್ಬ ಕೊಲೆ ಆರೋಪಿ : ಯತ್ನಾಳ್‌ ಆರೋಪ

ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ ಮುಸ್ಲಿಂ ಧರ್ಮಗುರು ಸಯ್ಯದ್‌ ಮೊಹಮ್ಮದ್‌ ತನ್ವೀರ್‌ ಹಾಸ್ಮೀಂ ಅವರ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಾಲು ಸಾಲು ಆರೋಪ ಮಾಡುತ್ತಿದ್ದಾರೆ.

ಹಾಸ್ಮೀಂ ಅವರಿಗೆ ಉಗ್ರರ ಜೊತೆ ನಂಟಿದೆ ಎಂದು ಆರೋಪಿಸಿದ್ದ ಯತ್ನಾಳ್‌ ಇದೀಗ ಮತ್ತೊಂದು ಬಾಂಬ್‌ ಸಿಡಿಸಿದ್ದು, ತನ್ವೀರ್‌ ಪೀರಾ ಹಾಸ್ಮೀಂ ಅವರು ಕೊಲೆ ಪ್ರಕರಣವೊಂದರ ಆರೋಪಿಯಾಗಿದ್ದಾರೆ ಎಂದಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌, ತನ್ವೀರ್‌ ಪೀರಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿತನಾಗಿದ್ದಾರೆ ಎಂದು ಹೇಳಿದ್ದು, ಕೊಲೆಯಾಗಿರುವ ವ್ಯಕ್ತಿಯ ಹೆಂಡತಿ ಸಾಕ್ಷ್ಯ ನಾಶ ಮಾಡುವುದಲ್ಲದೇ ನಮ್ಮ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಯತ್ನಾಳ್‌ ಅವರ ಆರೋಪದ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದ ತನ್ವೀರ್‌ ಹಾಸ್ಮೀಂ ಅವರು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ್‌ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ಈ ದೇಶವನ್ನೇ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಒಂದು ವೇಳೆ ಆರೋಪ ಸಾಬೀತು ಮಾಡುವಲ್ಲಿ ವಿಫಲವಾದರೆ ಯತ್ನಾಳ್‌ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾಕಿಸ್ತಾನಕ್ಕೆ ಫಲಾಯನ ಮಾಡಬೇಕು ಎಂದು ಸವಾಲು ಹಾಕಿದ್ದರು.

ಯತ್ನಾಳ್‌ ಅವರು ನನಗೆ ಐಸಿಸ್‌ ಜೊತೆ ನಂಟಿದೆ ಎಂದು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್‌ ಬುಕ್‌ ಖಾತೆಗೆ ನಾನೇ ಅಪ್ಲೋಡ್‌ ಮಾಡಿದ್ದೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್‌ ನ ಬಾಗ್ದಾದ್‌ ಗೆ ತೆರಳಿದ್ದೆ. ಆಗ ತೆಗೆದಿರುವ ಫೊಟೋಗಳು ಎಂದಿದ್ದರು.

ಇದೀಗ ಯತ್ನಾಳ್‌ ಅವರು ಮತ್ತೆ ತನ್ವೀರ್‌ ಹಾಸ್ಮೀಂ ಅವರ ವಿರುದ್ಧ ಹೊಸ ಆರೋಪ ಮಾಡಿದ್ದಾರೆ.

lokesh

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

6 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago