ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಬಿಜೆಪಿ ಕೈತಪ್ಪಿ ಜೆಡಿಎಸ್ ಪಾಲಾಗಿದೆ. ಈ ಬಗ್ಗೆ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನಗೊಂಡಿದ್ದಾರೆ.
ಸುಮಲತಾ ಅವರ ಮನವೊಲಿಸಲು ಇಂದು ( ಮಾರ್ಚ್ 29 ) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂಸದೆಯ ಜೆಪಿ ನಗರದ ನಿವಾಸಕ್ಕೆ ಭೇಟಿ ನೀಡಿದ್ದರು. ವಿಜಯೇಂದ್ರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಸುಮಲತಾ ಚುನಾವಣೆಗೆ ಬೆಂಬಲ ನೀಡಬೇಕೆಂದು ವಿಜಯೇಂದ್ರ ಕೇಳಿದ್ದಾರೆ. ಆದರೆ ಬೆಂಬಲಿಗರ ಸಭೆ ಬಳಿಕ ನನ್ನ ನಿಲುವನ್ನು ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆ ಎಂದೂ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಬೇಕಿತ್ತು. ನಾಳೆ ( ಮಾರ್ಚ್ 30 ) ಬೆಂಬಲಿಗರ ಜತೆ ಸಭೆ ನಡೆಸುತ್ತಿದ್ದೇನೆ. ನನ್ನು ನಿಲುವನ್ನು ಮಂಡ್ಯದಲ್ಲಿಯೇ, ಬೆಂಬಲಿಗರ ಮುಂದೆಯೇ ತಿಳಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…