ರಾಜಕೀಯ

ಬಾಯಿ ಸರಿ ಇದ್ದಿದ್ದರೆ ನಾನು ಸಿಎಂ ಆಗ್ತಿದ್ನಂತೆ : ಯತ್ನಾಳ್

ಬೆಳಗಾವಿ : ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು  ಅಂತಾ ಕೆಲವರು ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿರುವ ಯತ್ನಾಳ್‌ ಎಚ್‌.ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವಿಜಯಪುರಕ್ಕೆ 105 ಕೋಟಿ ರೂ. ನೀಡಿದ್ದರು. ದುರ್ದೈವ ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ರದ್ದು ಮಾಡಿತ್ತು. ಯತ್ನಾಳ್‌ ಅವರೇ ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು ಅಂತಾ ಕೆಲವರು ಹೇಳಿದ್ದರು. ನಾನ್ಯಾರಿಗೂ ಹೆದರುವುದಿಲ್ಲ ಹೇಲಬೇಕಾದ್ದನ್ನು ನೇರವಾಗಿ ಹೇಳ್ತೇನೆ ಎಂದಿದ್ದಾರೆ.
ಪಿಎಸಿಗೆ ಸಿಸಿ ಪಾಟೀಲ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಸಮಾಧಾನ ಮಾಡಲು ಹೊರಟಿದ್ದಾರೆ. ಇದಕ್ಕೆ ಮೇಲಿಂದ ಅನುಮತಿ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಬೊಮ್ಮಾಯಿ, ಭೈರತಿ ಬಸವರಾಜ್‌ ಅನುದಾನ ನೀಡಿ ನೆರವಾದರು ಅಧಿಕಾರದಲ್ಲಿದ್ದಾಗ ಸಹಾಯ ಮಾಡದವರು ಈಗ ಮಾಜಿಗಳಾಗಿದ್ದಾರೆ. ನಾನು ಟಾರ್ಗೆಟ್‌ ಮಾಡಿದರೆ ಅವರು ಮಾಜಿಯಾಗುವವರೆಗೂ ಬಿಡಲ್ಲ ನಾನು ಒಂಟಿ ಸಲಗ ಇದ್ದೇನೆ. ಒಂಟಿ ಸಲಗ ಆಗಿಯೇ ಹೊಡೆಯುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಕಳೆದ ಕೆಲ ದಿನಗಳಿಂದ ಯತ್ನಾಳ್‌ ಅವರು ಸ್ವಪಕ್ಷ ನಾಯಕರ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇಂದೂ ಕೂಡ ಅದೇ ರೀತಿ ಮಾತನಾಡಿರುವ ಯತ್ನಾಳ್‌ ಬಿಜೆಪಿ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದಾರೆ.
lokesh

Recent Posts

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

15 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

1 hour ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

2 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

2 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

2 hours ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago