ರಾಜಕೀಯ

ಬಾಯಿ ಸರಿ ಇದ್ದಿದ್ದರೆ ನಾನು ಸಿಎಂ ಆಗ್ತಿದ್ನಂತೆ : ಯತ್ನಾಳ್

ಬೆಳಗಾವಿ : ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು  ಅಂತಾ ಕೆಲವರು ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿರುವ ಯತ್ನಾಳ್‌ ಎಚ್‌.ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವಿಜಯಪುರಕ್ಕೆ 105 ಕೋಟಿ ರೂ. ನೀಡಿದ್ದರು. ದುರ್ದೈವ ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ರದ್ದು ಮಾಡಿತ್ತು. ಯತ್ನಾಳ್‌ ಅವರೇ ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು ಅಂತಾ ಕೆಲವರು ಹೇಳಿದ್ದರು. ನಾನ್ಯಾರಿಗೂ ಹೆದರುವುದಿಲ್ಲ ಹೇಲಬೇಕಾದ್ದನ್ನು ನೇರವಾಗಿ ಹೇಳ್ತೇನೆ ಎಂದಿದ್ದಾರೆ.
ಪಿಎಸಿಗೆ ಸಿಸಿ ಪಾಟೀಲ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಸಮಾಧಾನ ಮಾಡಲು ಹೊರಟಿದ್ದಾರೆ. ಇದಕ್ಕೆ ಮೇಲಿಂದ ಅನುಮತಿ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಬೊಮ್ಮಾಯಿ, ಭೈರತಿ ಬಸವರಾಜ್‌ ಅನುದಾನ ನೀಡಿ ನೆರವಾದರು ಅಧಿಕಾರದಲ್ಲಿದ್ದಾಗ ಸಹಾಯ ಮಾಡದವರು ಈಗ ಮಾಜಿಗಳಾಗಿದ್ದಾರೆ. ನಾನು ಟಾರ್ಗೆಟ್‌ ಮಾಡಿದರೆ ಅವರು ಮಾಜಿಯಾಗುವವರೆಗೂ ಬಿಡಲ್ಲ ನಾನು ಒಂಟಿ ಸಲಗ ಇದ್ದೇನೆ. ಒಂಟಿ ಸಲಗ ಆಗಿಯೇ ಹೊಡೆಯುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಕಳೆದ ಕೆಲ ದಿನಗಳಿಂದ ಯತ್ನಾಳ್‌ ಅವರು ಸ್ವಪಕ್ಷ ನಾಯಕರ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇಂದೂ ಕೂಡ ಅದೇ ರೀತಿ ಮಾತನಾಡಿರುವ ಯತ್ನಾಳ್‌ ಬಿಜೆಪಿ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದಾರೆ.
lokesh

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

27 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago