ರಾಜಕೀಯ

ಬಾಯಿ ಸರಿ ಇದ್ದಿದ್ದರೆ ನಾನು ಸಿಎಂ ಆಗ್ತಿದ್ನಂತೆ : ಯತ್ನಾಳ್

ಬೆಳಗಾವಿ : ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು  ಅಂತಾ ಕೆಲವರು ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿರುವ ಯತ್ನಾಳ್‌ ಎಚ್‌.ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವಿಜಯಪುರಕ್ಕೆ 105 ಕೋಟಿ ರೂ. ನೀಡಿದ್ದರು. ದುರ್ದೈವ ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ರದ್ದು ಮಾಡಿತ್ತು. ಯತ್ನಾಳ್‌ ಅವರೇ ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು ಅಂತಾ ಕೆಲವರು ಹೇಳಿದ್ದರು. ನಾನ್ಯಾರಿಗೂ ಹೆದರುವುದಿಲ್ಲ ಹೇಲಬೇಕಾದ್ದನ್ನು ನೇರವಾಗಿ ಹೇಳ್ತೇನೆ ಎಂದಿದ್ದಾರೆ.
ಪಿಎಸಿಗೆ ಸಿಸಿ ಪಾಟೀಲ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಸಮಾಧಾನ ಮಾಡಲು ಹೊರಟಿದ್ದಾರೆ. ಇದಕ್ಕೆ ಮೇಲಿಂದ ಅನುಮತಿ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಬೊಮ್ಮಾಯಿ, ಭೈರತಿ ಬಸವರಾಜ್‌ ಅನುದಾನ ನೀಡಿ ನೆರವಾದರು ಅಧಿಕಾರದಲ್ಲಿದ್ದಾಗ ಸಹಾಯ ಮಾಡದವರು ಈಗ ಮಾಜಿಗಳಾಗಿದ್ದಾರೆ. ನಾನು ಟಾರ್ಗೆಟ್‌ ಮಾಡಿದರೆ ಅವರು ಮಾಜಿಯಾಗುವವರೆಗೂ ಬಿಡಲ್ಲ ನಾನು ಒಂಟಿ ಸಲಗ ಇದ್ದೇನೆ. ಒಂಟಿ ಸಲಗ ಆಗಿಯೇ ಹೊಡೆಯುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಕಳೆದ ಕೆಲ ದಿನಗಳಿಂದ ಯತ್ನಾಳ್‌ ಅವರು ಸ್ವಪಕ್ಷ ನಾಯಕರ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇಂದೂ ಕೂಡ ಅದೇ ರೀತಿ ಮಾತನಾಡಿರುವ ಯತ್ನಾಳ್‌ ಬಿಜೆಪಿ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದಾರೆ.
lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

17 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago