ಚಿಕ್ಕಮಗಳೂರು : ನನ್ನ ಜೀವನದಲ್ಲಿ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ ಸರ್ಕಾರ ಪ್ರಮಾಣಿಕ ಅನ್ನೋದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.
ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ ಅನ್ನುವುದು ನಮ್ಮ ಆರೋಪವಲ್ಲ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ. ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಭಕ್ತಿ ಇರುವುದರಿಂದ ಅಲ್ಲಿಗೆ ಕರೆದಿದ್ದಾರೆ. ನಾವು ತಪ್ಪೇ ಮಾಡಿಲ್ಲ ಅನ್ನೋದಾದ್ರೆ ಹೋಗಿ ಪ್ರಮಾಣ ಮಾಡಬಹುದಲ್ವಾ? ಎಂದು ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರ ಬಳಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಮೊದಲು ಹಳೇಯದ್ದಕ್ಕೆಲ್ಲಾ ಸೇರಿಸಿ 7% ಫಿಕ್ಸ್ ಮಾಡಿದ್ರು, ಮದ್ಯವರ್ತಿಗಳು 10% ಅಂದ್ರು ಆಮೇಲೆ ಚರ್ಚೆ ಮಾಡಿ 15% ಆದ್ರೆ ಮಾತ್ರ ಕ್ಲಿಯರ್ ಅಂತಾ ಹೇಳಿದ್ದಾರೆ. ಆರೋಪ ಗುತ್ತಿಗೆದಾರರ ಸಂಘದ್ದು, ಸುಳ್ಳು ಅನ್ನೊದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಸತ್ಯ ಮಾಡಲಿ. ಸತ್ಯ ಮಾಡುವಾಗ ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ರೆ ಸಾಕು, ಬೇರೆ ಸಾಕ್ಷಿಯೇ ಬೇಕಾಗಿಲ್ಲ ಎಂದು ಹೇಳಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…