ರಾಜಕೀಯ

ಡಿಕೆಶಿ ತಪ್ಪು ಮಾಡಿಲ್ಲಅನ್ನೋದಾದ್ರೆ ಅಜ್ಜಯ್ಯ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ : ಸಿ.ಟಿ ರವಿ

ಚಿಕ್ಕಮಗಳೂರು : ನನ್ನ ಜೀವನದಲ್ಲಿ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ ಸರ್ಕಾರ ಪ್ರಮಾಣಿಕ ಅನ್ನೋದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.

ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ ಅನ್ನುವುದು ನಮ್ಮ ಆರೋಪವಲ್ಲ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ. ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಭಕ್ತಿ ಇರುವುದರಿಂದ ಅಲ್ಲಿಗೆ ಕರೆದಿದ್ದಾರೆ. ನಾವು ತಪ್ಪೇ ಮಾಡಿಲ್ಲ ಅನ್ನೋದಾದ್ರೆ ಹೋಗಿ ಪ್ರಮಾಣ ಮಾಡಬಹುದಲ್ವಾ? ಎಂದು ಪ್ರಶ್ನಿಸಿದ್ದಾರೆ.

ಗುತ್ತಿಗೆದಾರರ ಬಳಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಮೊದಲು ಹಳೇಯದ್ದಕ್ಕೆಲ್ಲಾ ಸೇರಿಸಿ 7% ಫಿಕ್ಸ್ ಮಾಡಿದ್ರು, ಮದ್ಯವರ್ತಿಗಳು 10% ಅಂದ್ರು ಆಮೇಲೆ ಚರ್ಚೆ ಮಾಡಿ 15% ಆದ್ರೆ ಮಾತ್ರ ಕ್ಲಿಯರ್ ಅಂತಾ ಹೇಳಿದ್ದಾರೆ. ಆರೋಪ ಗುತ್ತಿಗೆದಾರರ ಸಂಘದ್ದು, ಸುಳ್ಳು ಅನ್ನೊದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಸತ್ಯ ಮಾಡಲಿ. ಸತ್ಯ ಮಾಡುವಾಗ ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ರೆ ಸಾಕು, ಬೇರೆ ಸಾಕ್ಷಿಯೇ ಬೇಕಾಗಿಲ್ಲ ಎಂದು ಹೇಳಿದ್ದಾರೆ.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

2 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

10 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

20 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago