ನವದೆಹಲಿ : ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ.
ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದ ಸಂದರ್ಭದಲ್ಲಿ ಸಿಟ್ಟಿಗೆದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ವಿಪಕ್ಷ ನಾಯಕರು ಸೈಲೆಂಟಾಗಿ ಇರದಿದ್ರೆ ಅವರ ಮನೆಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬರುತ್ತಾರೆ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.
ಮೀನಾಕ್ಷಿ ಲೇಖಿಯ ಮಾತುಗಳು ರಾಷ್ಟ್ರ ರಾಜಕೀಯದಲ್ಲೀಗ ಸಂಚಲನ ಮೂಡಿಸಿವೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ನಮ್ಮ ಮಾತು ನಿಜ ಎಂದು ಕೇಂದ್ರ ಸಚಿವರೇ ಈಗ ಒಪ್ಕೊಂಡಿದ್ದಾರೆ. ಆವೇಶದಲ್ಲಿ ಮೀನಾಕ್ಷಿ ಲೇಖಿ ವಿಪಕ್ಷಗಳನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಎನ್ಸಿಪಿ ಹೇಳಿದೆ.
ಈ ಸಂಬಂಧ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಟ್ವೀಟ್ ಮಾಡಿ, ಇದು ಎಚ್ಚರಿಕೆನಾ? ಬೆದರಿಕೆನಾ ಎಂದು ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ಸೇರಿ ಹಲವು ಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…